ವಿಧಾನ ಸೌಧದಲ್ಲಿ ನಡೆದ ದೇಶದ್ರೋಹಿ ಕೃತ್ಯಕ್ಕೆ ಸಾಕ್ಷಿ ಕೇಳುವ ಕಾಂಗ್ರೆಸ್ ಸರ್ಕಾರಕ್ಕೆ ನಾಚಿಕೆಯಾಗಬೇಕು: ಆರ್ ಅಶೋಕ

ವಿಧಾನ ಸೌಧದಲ್ಲಿ ಪಾಕಿಸ್ತಾನ್ ಪರ ಘೋಷಣೆ ಕೂಗಿದ ಸಂಗತಿ ದೇಶ ವಿದೇಶಗಳಲ್ಲಿ ಪ್ರತಿಧ್ವನಿಸುತ್ತಿದ್ದರೂ ಸರ್ಕಾರ ಮಾತ್ರ ಏನೂ ನಡೆದಿಲ್ಲ ಎಂಬಂತೆ ವರ್ತಿಸುತ್ತಿದೆ. ಮಾಧ್ಯಮಗಳ ವರದಿಯನ್ನು ಕಾಂಗ್ರೆಸ್ ನಂಬಲು ತಯಾರಿಲ್ಲ, ಮಾಧ್ಯಮಗಳ ಮೇಲೆ ಗೂಬೆ ಕೂರಿಸುವ ಕೆಲಸ ಸರ್ಕಾರ ಮಾಡುತ್ತಿದೆ ಎಂದು ಅಶೋಕ ಹೇಳಿದರು.

ವಿಧಾನ ಸೌಧದಲ್ಲಿ ನಡೆದ ದೇಶದ್ರೋಹಿ ಕೃತ್ಯಕ್ಕೆ ಸಾಕ್ಷಿ ಕೇಳುವ ಕಾಂಗ್ರೆಸ್ ಸರ್ಕಾರಕ್ಕೆ ನಾಚಿಕೆಯಾಗಬೇಕು: ಆರ್ ಅಶೋಕ
|

Updated on:Feb 28, 2024 | 5:37 PM

ಬೆಂಗಳೂರು: ಸದನದಲ್ಲಿಂದು ಆಡಳಿತ ಪಕ್ಷದ ಬೆವರಿಳಿಸಿದ ವಿರೋಧ ಪಕ್ಷದ ನಾಯಕ ಆರ್ ಅಶೋಕ (R Ashoka) ಸದನದ ಹೊರಗೆ ಕೂಡ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ವಿಧಾನ ಸೌಧದಲ್ಲಿ ಪಾಕಿಸ್ತಾನ್ ಪರ ಘೋಷಣೆ (pro Pakistan slogan) ಕೂಗಿದ ಸಂಗತಿ ದೇಶ ವಿದೇಶಗಳಲ್ಲಿ ಪ್ರತಿಧ್ವನಿಸುತ್ತಿದ್ದರೂ ಸರ್ಕಾರ (Karnataka government) ಮಾತ್ರ ಏನೂ ನಡೆದಿಲ್ಲ ಎಂಬಂತೆ ವರ್ತಿಸುತ್ತಿದೆ. ಮಾಧ್ಯಮಗಳ ವರದಿಯನ್ನು ಕಾಂಗ್ರೆಸ್ ನಂಬಲು ತಯಾರಿಲ್ಲ, ಮಾಧ್ಯಮಗಳ ಮೇಲೆ ಗೂಬೆ ಕೂರಿಸುವ ಕೆಲಸ ಸರ್ಕಾರ ಮಾಡುತ್ತಿದೆ. ಕಾಂಗ್ರೆಸ್ ಸರ್ಕಾರ ತನ್ನ ಹೊಣೆಗಾರಿಕೆಯಿಂದ ನುಣುಚಿಕೊಳ್ಳುತ್ತಿದೆ, ನಿನ್ನೆ ಘಟನೆ ನಡೆದ ಸಂಗತಿ ಗೊತ್ತಾದ ಕೂಡಲೇ ಸಚಿವ ಸಂಪುಟದ ಸಭೆ ಕರೆದು ವಿಷಯವನ್ನು ಚರ್ಚಿಸಬೇಕಿತ್ತು ಮತ್ತು ಖಂಡಿಸಬೇಕಿತ್ತು, ಇವತ್ತು ಅಧಿವೇಶನದಲ್ಲಿ ಒಂದು ವಾಕ್ಯದ ನಿರ್ಣಯ ಮಂಡಿಸಬೇಕಿತ್ತು ಎಂದು ಅಶೋಕ ಹೇಳಿದರು. ವಿಧಾನ ಸೌಧಕ್ಕೆ ಒಬ್ಬೇಒಬ್ಬ ಮಂತ್ರಿ ಬಂದಿಲ್ಲ, ಪಾಕ್ ಪರ ಘೋಷಣೆಗಳನ್ನು ವಿಧಾನಸೌಧದಲ್ಲಿ ಕೂಗಿದರೂ ಅದಕ್ಕೆ ಪುರಾವೆ ಕೇಳುತ್ತಾರೆ, ನಾಚಿಕೆಯಾಗಬೇಕು ಈ ಸರ್ಕಾರಕ್ಕೆ ಎಂದು ಅಶೋಕ್ ಜರಿದರು. ರಾಜ್ಯಸಭೆಗೆ ಆಯ್ಕೆಯಾಗಿರುವ ನಾಸೀರ್ ಹುಸ್ಸೇನ್ ಮಾಧ್ಯಮದವರನ್ನು ಅವಾಚ್ಯ ಪದಗಳಲ್ಲಿ ನಿಂದಿಸುತ್ತಾರೆ. ಸದನದಲ್ಲಿ ಗೃಹ ಸಚಿವರು, ಇಂಥ ಕೃತ್ಯಗಳನ್ನು ಸಹಿಸಲ್ಲ, ಶಿಕ್ಷೆಗೊಳಪಡಿಸುತ್ತೇವೆ ಅಂತ ಹೇಳುತ್ತಾರೆ, ಅದರೆ 24 ಗಂಟೆ ಕಳೆದರೂ ಯಾರನ್ನೂ ಬಂಧಿಸಿಲ್ಲ ಎಂದು ಅಶೋಕ ಕಿಡಿಕಾರಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  Karnataka Budget Session: ಪಾಕಿಸ್ತಾನ್ ಪರ ಘೋಷಣೆ ಕೂಗಿರುವ ವ್ಯಕ್ತಿ ಯಾರೇ ಆಗಿರಲಿ, ಶಿಕ್ಷಿಸದೆ ಬಿಡಲ್ಲ: ಜಿ ಪರಮೇಶ್ವರ್, ಗೃಹ ಸಚಿವ

Published On - 4:57 pm, Wed, 28 February 24

Follow us
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್