ಜೈನಮುನಿ ಹತ್ಯೆ ಪ್ರಕರಣದಲ್ಲಿ ಒಂದು ನಿರ್ದಿಷ್ಟ ಕೋಮಿನ ಆರೋಪಿಯನ್ನು ಕಾಂಗ್ರೆಸ್ ಸರ್ಕಾರ ಸಂರಕ್ಷಿಸುವ ಪ್ರಯತ್ನ ಮಾಡುತ್ತಿದೆ: ಬಸನಗೌಡ ಯತ್ನಾಳ್

ಅರುಣ್​ ಕುಮಾರ್​ ಬೆಳ್ಳಿ

Updated on: Jul 10, 2023 | 4:40 PM

ನೀವು ವಿಷಯಾಂತರ ಮಾಡುತ್ತಿರುವಿರಿ, ಪರಮ ಪೂಜ್ಯ ಜೈನ ಮುನಿಗಳ ಪ್ರಸ್ತಾಪ ಮಾಡುತ್ತಾ ಬೇರೇನೋ ಹೇಳುತ್ತಿರುವಿರಿ ಎಂದು ಸ್ಪೀಕರ್ ಖಾದರ್ ಹೇಳಿದರು,

ಬೆಂಗಳೂರು: ಜೈನಮುನಿ ಕಾಮಕುಮಾರನಂದಿ ಮಹಾರಾಜ (Kamakumara Nandi Maharaj)) ಅವರ ಬರ್ಬರ ಹತ್ಯೆಗೆ ಸಂಬಂಧಿಸಿದಂತೆ ಸದನದಲ್ಲಿ ಇಂದು ಮಾತಾಡಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಮುನಿಗಳ ಕಠಿಣ ಜೀವನ ಕ್ರಮದ ಬಗ್ಗೆ ವಿವರಿಸಿ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹಾಳಾಗಿ ಹೋಗಿದೆ ಎಂದರು. ರವಿವಾರದಂದು ಟಿ ನರಸೀಪುರದಲ್ಲಿ ಹಿಂದೂ ಕಾರ್ಯಕರ್ತನೊಬ್ಬರ (Hindu activist) ಕೊಲೆಯಾಗಿದೆ ಮತ್ತು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯದಲ್ಲಿ ಪಾಕಿಸ್ತಾನದ ಧ್ವಜಗಳು ಹಾರಾಡುತ್ತಿವೆ ಎಂದು ಹೇಳಿದಾಗ ಕೆಲ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಸ್ಪೀಕರ್ ಯುಟಿ ಖಾದರ್ ಸಹ ಮಧ್ಯೆ ಪ್ರವೇಶಿಸಿ ಯತ್ನಾಳ್ ಅವರಿಗೆ, ನೀವು ವಿಷಯಾಂತರ ಮಾಡುತ್ತಿರುವಿರಿ, ಪರಮ ಪೂಜ್ಯ ಜೈನ ಮುನಿಗಳ ಪ್ರಸ್ತಾಪ ಮಾಡುತ್ತಾ ಬೇರೇನೋ ಹೇಳುತ್ತಿರುವಿರಿ, ವಿಷಯದ ಮೇಲೆ ಮಾತಾಡಿ, ಉಳಿದ ಸಂಗತಿಗಳನ್ನು ಬೇರೆ ಸಮಯದಲ್ಲಿ ಮಾತಾಡಿ ಅನ್ನುತ್ತಾರೆ. ಆರೋಪಿಯಾಗಿರುವ ಒಂದು ಕೋಮಿನ ಸದಸ್ಯನನ್ನು ಉಳಿಸಲು ಕಾಂಗ್ರೆಸ್ ಸರ್ಕಾರ ಪೊಲೀಸ್ ವ್ಯವಸ್ಥೆಯನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಬಸನಗೌಡ ಪಾಟೀಲ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.