Karnataka Assembly polls: ಬಹುಮತ ಸಿಕ್ಕರೆ ತಾನೆ ಕಾಂಗ್ರೆಸ್ ನಾಯಕರು ಮುಖ್ಯಮಂತ್ರಿಯಾಗುವ ಕನಸು ಕಾಣೋದು? ಹೆಚ್ ಡಿ ಕುಮಾರಸ್ವಾಮಿ

ಅರುಣ್​ ಕುಮಾರ್​ ಬೆಳ್ಳಿ

Updated on: Apr 04, 2023 | 10:49 AM

ಕಾಂಗ್ರೆಸ್ ಮತ್ತು ಬಿಜೆಪಿ ಎರಡು ಪಕ್ಷಗಳೂ ತಲಾ 60-70 ಸ್ಥಾನಗಳಿಗಿಂತ ಹೆಚ್ಚು ಗೆಲ್ಲಲ್ಲ, ಜೆಡಿಎಸ್ ಪಕ್ಷವೇ 120-130 ಸೀಟು ಗೆದ್ದು ಅಧಿಕಾರಕ್ಕೆ ಬರೋದು ಎಂದು ಕುಮಾರಸ್ವಾಮಿ ಹೇಳಿದರು.

ಬೆಂಗಳೂರು: ಮಂಗಳವಾರ ಬೆಳಗ್ಗೆ ನಗರದ ಮೋಡ ಮುಸುಕಿದ ವಾತಾವರಣದಲ್ಲಿ ತಿಳಿನೀಲಿ ವರ್ಣದ ಟೀ-ಶರ್ಟ್ ಧರಿಸಿ ಕಾರಲ್ಲಿ ಹೊರಟಿದ್ದ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್ ಡಿ ಕುಮಾರಸ್ವಾಮಿಯವರಿಗೆ (HD Kumaraswamy) ಮಾಧ್ಯಮ ಪ್ರತಿನಿಧಿಗಳು ಅಡ್ಡಗಟ್ಟಿ ಸಿದ್ದರಾಮಯ್ಯ (Siddaramaiah) ಮುಖ್ಯಮಂತ್ರಿಯಾಗುವುದಾಗಿ ಹೇಳುತ್ತಿರುವ ಬಗ್ಗೆ ಕೇಳಿದರು. ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಆಕಾಂಕ್ಷಿಗಳ (aspirants) ದೊಡ್ಡ ಪಟ್ಟಿಯೇ ಇದೆ. ಅಷ್ಟಕ್ಕೂ ನಂಬರ್ ಗಳಿದ್ದರೆ ತಾನೆ ಕಾಂಗ್ರೆಸ್ ನಾಯಕರು ಮುಖ್ಯಮಂತ್ರಿಯಾಗುವ ಕನಸು ಕಾಣೋದು ಅಂತ ಕುಮಾರಸ್ವಾಮಿ ವ್ಯಂಗ್ಯವಾಡಿದರು. ಕಾಂಗ್ರೆಸ್ ಮತ್ತು ಬಿಜೆಪಿ ಎರಡು ಪಕ್ಷಗಳೂ ತಲಾ 60-70 ಸ್ಥಾನಗಳಿಗಿಂತ ಹೆಚ್ಚು ಗೆಲ್ಲಲ್ಲ, ಜೆಡಿಎಸ್ ಪಕ್ಷವೇ 120-130 ಸೀಟು ಗೆದ್ದು ಅಧಿಕಾರಕ್ಕೆ ಬರೋದು ಎಂದು ಕುಮಾರಸ್ವಾಮಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.