ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ 6 ಮಹಿಳೆಯರಿಗೆ ಟಿಕೆಟ್ ನೀಡಿದೆ: ಸೌಮ್ಯ ರೆಡ್ಡಿ, ಕಾಂಗ್ರೆಸ್ ಅಭ್ಯರ್ಥಿ

ಅರುಣ್​ ಕುಮಾರ್​ ಬೆಳ್ಳಿ

Updated on: Apr 05, 2024 | 10:38 AM

ಕಳೆದ ಸಲ ಸಂಸತ್ತಿನಲ್ಲಿ ಕರ್ನಾಟಕದಿಂದ ಕಾಂಗ್ರೆಸ್ ಪಕ್ಷದ ಏಕೈಕ ಪ್ರತಿನಿಧಿಯಾಗಿದ್ದ ಡಿಕೆ ಸುರೇಶ್ ಮಾತ್ರ ರಾಜ್ಯದ ಸಮಸ್ಯೆಗಳನ್ನು ಚರ್ಚಸಿದರು. ಆದರೆ ಈ ಬಾರಿ ಬೇರೆ ಸನ್ನಿವೇಶ ಸೃಷ್ಟಿಯಾಗಲಿದೆ ಎಂದು ಹೇಳಿದ ಸೌಮ್ಯ, ಕಾಂಗ್ರೆಸ್ ಪಕ್ಷವು 6 ಮಹಿಳೆಯರಿಗೆ, ಯುವಕರಿಗೆ, ಒಕ್ಕಲಿಗರಿಗೆ ಮತ್ತು ಶಿಕ್ಷಣ ತಜ್ಞರಿಗೆ ಟಿಕೆಟ್ ನೀಡಿದೆ ಎಂದರು.

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬೇರೆ ಬೇರೆ ಪಕ್ಷಗಳಿಂದ ಸ್ಪರ್ಧೆಗಿಳಿದವರು ಆಲೌಟ್ ಪ್ರಚಾರ ಆರಂಭಿಸುವ ಮೊದಲು ಮಠಮಾನ್ಯ ಮತ್ತು ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ. ನಿನ್ನೆ ರಾತ್ರಿ ದಕ್ಷಿಣ ಕರ್ನಾಟಕದ (southern Karnataka) ಕ್ಷೇತ್ರಗಳಿಂದ ಕಣಕ್ಕಿಳಿದಿರುವ ಕಾಂಗ್ರೆಸ್ ಅಭ್ಯರ್ಥಿಗಳು ಮತ್ತು ಕೆಲ ಸಚಿವರು ಸುತ್ತೂರು ಮಠಕ್ಕೆ ಭೇಟಿ ನೀಡಿ ನಿರ್ಮಲಾನಂದ ಶ್ರೀಗಳ (Nirmalanada Sri) ಆಶೀರ್ವಾದ ಪಡೆದರು. ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಬೆಂಗಳೂರು ದಕ್ಷಿಣ ಅಭ್ಯರ್ಥಿ ಸೌಮ್ಯರೆಡ್ಡಿ (Sowmya Reddy) ಬಿಜಿಎಸ್ ಸಂಸ್ಥೆಯು ಶೈಕ್ಷಣಿಕ, ವೈದ್ಯಕೀಯ ಮತ್ತು ಬೇರೆ ಹಲವಾರು ಕ್ಷೇತ್ರಗಳಲ್ಲಿ ಜನರಿಗೆ ಒದಗಿಸುತ್ತಿರುವ ಸೇವೆಯನ್ನು ಕೊಂಡಾಡಿದರು. ನಂತರ ಚುನಾವಣೆಯ ಬಗ್ಗೆ ಮಾತಾಡಿದ ಅವರು, ಈ ಬಾರಿ ಕರ್ನಾಟಕದಲ್ಲಿ ಕಾಂಗ್ರೆಸ್ ಅಲೆ ಇದೆ, ಕಳೆದ ಹತ್ತು ವರ್ಷಗಳಿಂದ ಬಿಜೆಪಿ ಸರ್ಕಾರದ ಆಡಳಿತ ನೋಡಿರುವ ಜನ ಬೇಸತ್ತು ಬದಲಾವಣೆ ಬಯಸಿದ್ದಾರೆ. ಕಳೆದ ಸಲ ಸಂಸತ್ತಿನಲ್ಲಿ ಕರ್ನಾಟಕದಿಂದ ಕಾಂಗ್ರೆಸ್ ಪಕ್ಷದ ಏಕೈಕ ಪ್ರತಿನಿಧಿಯಾಗಿದ್ದ ಡಿಕೆ ಸುರೇಶ್ ಮಾತ್ರ ರಾಜ್ಯದ ಸಮಸ್ಯೆಗಳನ್ನು ಚರ್ಚಸಿದರು. ಆದರೆ ಈ ಬಾರಿ ಬೇರೆ ಸನ್ನಿವೇಶ ಸೃಷ್ಟಿಯಾಗಲಿದೆ ಎಂದು ಹೇಳಿದ ಸೌಮ್ಯ, ಕಾಂಗ್ರೆಸ್ ಪಕ್ಷವು 6 ಮಹಿಳೆಯರಿಗೆ, ಯುವಕರಿಗೆ, ಒಕ್ಕಲಿಗರಿಗೆ ಮತ್ತು ಶಿಕ್ಷಣ ತಜ್ಞರಿಗೆ ಟಿಕೆಟ್ ನೀಡಿದೆ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:    ಲೋಕಸಭಾ ಚುನಾವಣೆ ಮುಗಿಯುವವರೆಗೆ ಅಪ್ಪ-ಮಗನ ರಿಪೇರಿ ಕೆಲಸವನ್ನು ಬೇರೆಯವರಿಗೆ ವಹಿಸಿಕೊಟ್ಟಿದ್ದೇನೆ: ಬಸನಗೌಡ ಯತ್ನಾಳ್

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.