ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿಗೆ ಹೈಕಮಾಂಡ್ ತುರ್ತು ಬುಲಾವ್: ಕಾಂಗ್ರೆಸ್​​ನಲ್ಲಿ ಸಂಚಲನ

Updated on: May 24, 2026 | 9:57 PM

ಸಿಎಂ ಕುರ್ಚಿ ಮುಸುಕಿನ ಗುದ್ದಾಟ ಹಾಗೂ ಸಂಪುಟ ವಿಸ್ತರಣೆಯ ರಾಜಕೀಯ ಪ್ರಹಸನಗಳು. ಹೀಗೆ ಕರ್ನಾಟಕ ಕಾಂಗ್ರೆಸ್​​​ನಲ್ಲಿ (karnataka Congress) ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆಯುತ್ತಿದ್ದು, ಇದರ ಮಧ್ಯೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮತ್ತು ಡಿಸಿಎಂ ಡಿಕೆ ಶಿವಕುಮಾರ್​​​​ಗೆ (DK Shivakumar) ಹೈಕಮಾಂಡ್​ನಿಂದ ಬುಲಾವ್ ಬಂದಿದೆ. ಹೌದು... ಮೇ 26ರಂದು ದೆಹಲಿಗೆ (New Delhi) ಬರುವಂತೆ ಸಿಎಂ ಸಿದ್ದರಾಮಯ್ಯಗೆ ಹೈಕಮಾಂಡ್ ಕರೆ ನೀಡಿದೆ. ಮೇಲ್ನೋಟಕ್ಕೆ ರಾಜ್ಯಸಭಾ ಚುನಾವಣೆ ಸಂಬಂಧ ಚರ್ಚಿಸಲು ಈ ಆಹ್ವಾನ ನೀಡಿರಬಹುದು ಎನ್ನಲಾಗಿದೆ. ಆದ್ರೆ, ಇದೇ ವೇಳೆ ಅಧಿಕಾರ ಹಂಚಿಕೆ ವಿಚಾರ ಪ್ರಸ್ತಾಪಿಸುವ ಸಾಧ್ಯತೆ ಇದೆ.

ಬೆಂಗಳೂರು, (ಮೇ 24): ಸಿಎಂ ಕುರ್ಚಿ ಮುಸುಕಿನ ಗುದ್ದಾಟ ಹಾಗೂ ಸಂಪುಟ ವಿಸ್ತರಣೆಯ ರಾಜಕೀಯ ಪ್ರಹಸನಗಳು. ಹೀಗೆ ಕರ್ನಾಟಕ ಕಾಂಗ್ರೆಸ್​​​ನಲ್ಲಿ (karnataka Congress) ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆಯುತ್ತಿದ್ದು, ಇದರ ಮಧ್ಯೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮತ್ತು ಡಿಸಿಎಂ ಡಿಕೆ ಶಿವಕುಮಾರ್​​​​ಗೆ (DK Shivakumar) ಹೈಕಮಾಂಡ್​ನಿಂದ ಬುಲಾವ್ ಬಂದಿದೆ. ಹೌದು… ಮೇ 26ರಂದು ದೆಹಲಿಗೆ (New Delhi) ಬರುವಂತೆ ಸಿಎಂ ಸಿದ್ದರಾಮಯ್ಯಗೆ ಹೈಕಮಾಂಡ್ ಕರೆ ನೀಡಿದೆ. ಮೇಲ್ನೋಟಕ್ಕೆ ರಾಜ್ಯಸಭಾ ಚುನಾವಣೆ ಸಂಬಂಧ ಚರ್ಚಿಸಲು ಈ ಆಹ್ವಾನ ನೀಡಿರಬಹುದು ಎನ್ನಲಾಗಿದೆ. ಆದ್ರೆ, ಇದೇ ವೇಳೆ ಅಧಿಕಾರ ಹಂಚಿಕೆ ವಿಚಾರ ಪ್ರಸ್ತಾಪಿಸುವ ಸಾಧ್ಯತೆ ಇದೆ.

ಸಂಪುಟ ವಿಸ್ತರಣೆ ಹಾಗೂ ನಾಯಕತ್ವ ಬದಲಾವಣೆ ವಿಚಾರವಾಗಿ ನಿರ್ಮಾಣವಾಗಿರುವ ಗೊಂದಲಗಳನ್ನ
ಕೇರಳದಲ್ಲಿ ಸರ್ಕಾರ ರಚನೆ ನಂತರ ಗಮನ ಹರಿಸುವುದಾಗಿ ಹೈಕಮಾಂಡ್ ಹೇಳಿತ್ತು. ಅದರಂತೆ ಇದೀಗ ರಾಜ್ಯದತ್ತ ಚಿತ್ತ ಹರಿಸಿದ್ದು, ಮಂಗಳವಾರ ದೆಹಲಿಗೆ ಬರುವಂತೆ ಸಿಎಂ ಹಾಗೂ ಡಿಸಿಎಂಗೆ ಆಹ್ವಾನ ನೀಡಿದೆ. ಹೀಗಾಗಿ ಈ ಬೆಳವಣಿಗೆ ರಾಜ್ಯ ಕಾಂಗ್ರೆಸ್​​​ನಲ್ಲಿ ಸಂಚಲನ ಮೂಡಿಸಿದೆ.

Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More