AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಹೈಕಮಾಂಡ್‌ನಿಂದ ಬೆಂಗಳೂರಿನಲ್ಲಿ ಮಹತ್ವದ ಸಭೆ: ವೇಣುಗೋಪಾಲ್​​, ಸುರ್ಜೇವಾಲ ಭಾಗಿ

ಕಾಂಗ್ರೆಸ್ ಹೈಕಮಾಂಡ್‌ನಿಂದ ಬೆಂಗಳೂರಿನಲ್ಲಿ ಮಹತ್ವದ ಸಭೆ: ವೇಣುಗೋಪಾಲ್​​, ಸುರ್ಜೇವಾಲ ಭಾಗಿ

ಪ್ರಸನ್ನ ಗಾಂವ್ಕರ್​
| Edited By: |

Updated on: Sep 15, 2026 | 11:36 AM

Share

ಕಾಂಗ್ರೆಸ್ ಹೈಕಮಾಂಡ್ ನಾಯಕರುಗಳಾದ ಕೆ.ಸಿ. ವೇಣುಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೆವಾಲಾ ಬೆಂಗಳೂರಿಗೆ ಆಗಮಿಸಿದ್ದಾರೆ. ಪಕ್ಷದ ಆಂತರಿಕ ಅಸಮಾಧಾನ, ಸಂಪುಟದಲ್ಲಿನ ಖಾಲಿ ಸ್ಥಾನಗಳ ಭರ್ತಿ, ನಿಗಮ ಮಂಡಳಿ ಅಧ್ಯಕ್ಷ ಸ್ಥಾನಗಳ ನೇಮಕ ಮತ್ತು 2028ರ ಚುನಾವಣಾ ಸಿದ್ಧತೆಗಳ ಕುರಿತು ಸಿಎಂ, ಸಿದ್ದರಾಮಯ್ಯ ಹಾಗೂ ಹರಿಪ್ರಸಾದ್ ಅವರೊಂದಿಗೆ ಮಹತ್ವದ ಸಭೆಗಳನ್ನು ನಡೆಸಲಿದ್ದಾರೆ.

ಬೆಂಗಳೂರು, ಸೆಪ್ಟೆಂಬರ್​​ 15: ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್​​ ಸುರ್ಜೇವಾಲಾ ಮತ್ತು ಕೆ.ಸಿ. ವೇಣುಗೋಪಾಲ್​​ ಇಂದು ರಾತ್ರಿ ಬೆಂಗಳೂರಿಗೆ ಆಗಮಿಸುತ್ತಿದ್ದು, ನಾಳೆ ಎರಡು ಮಹತ್ವದ ಸಭೆ ನಡೆಸಲಿದ್ದಾರೆ. ಸಿಎಂ ಡಿ.ಕೆ. ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಜೊತೆಗೆ ಮಹತ್ವದ ಮೀಟಿಂಗ್​​ ನಡೆಸಲಿದ್ದಾರೆ. ಬೆಳಗ್ಗೆ ನೂತನವಾಗಿ ಆಯ್ಕೆಯಾದ ಡಿಸಿಸಿ ಅಧ್ಯಕ್ಷರ ಜೊತೆಗೆ ಸಭೆ ನಡೆಸಲಿದ್ದು, ಬಳಿಕ ಮಧ್ಯಾಹ್ನ ಮೂವರು ನಾಯಕರೊಂದಿಗೆ ಮಹತ್ವದ ವಿಷಯಗಳ ಕುರಿತು ಸಮಾಲೋಚನೆ ನಡೆಸಲಿದ್ದಾರೆ. ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನಕ್ಕೆ ಯಾವ ಶಾಸಕರಿಗೆ ಅವಕಾಶ ನೀಡಬೇಕು ಎಂಬ ಬಗ್ಗೆ ಸೇರಿ ಡಿಕೆಶಿ ಕ್ಯಾಬಿನೆಟ್​​ನಲ್ಲಿ ಖಾಲಿ ಇರುವ 2 ಸ್ಥಾನ ಭರ್ತಿ ಮಾಡುವ ಸಂಬಂಧ ಚರ್ಚೆ ನಡೆಯಲಿದೆ. 2028ರ ಚುನಾವಣೆಗೆ ಈಗಿನಿಂದಲೇ ತಯಾರಿ ಆರಂಭಿಸಲು ಸೂಚನೆ ಜೊತೆಗೆ ಸರ್ಕಾರ ಮತ್ತು ಪಕ್ಷ ಎರಡೂ ಸಮನ್ವಯತೆಯಿಂದ ಕೆಲಸ ಮಾಡಲು ಸಭೆಯಲ್ಲಿ ಸ್ಟ್ರಾಟಜಿ ರೂಪಿಸಲಿದ್ದಾರೆ ಎನ್ನಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us