ದೆಹಲಿ: ರಾಜ್ಯ ಕಾಂಗ್ರೆಸ್ ನಾಯಕರ ಜೊತೆ ಪಕ್ಷದ ಹೈಕಮಾಂಡ್ ಮಹತ್ವದ ಸಭೆ ಶುರುವಾಗುವ ಮೊದಲಿನ ಎಕ್ಸ್​ಕ್ಲ್ಯೂಸಿವ್ ಫುಟೇಜ್

ಅರುಣ್​ ಕುಮಾರ್​ ಬೆಳ್ಳಿ

Updated on: Aug 02, 2023 | 5:20 PM

ರಾಹುಲ್ ಬಲಕ್ಕೆ ಡಿಕೆ ಶಿವಕುಮಾರ್, ಅವರ ಪಕ್ಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿ ಪರಮೇಶ್ವರ್ ಮತ್ತು ಇತರ ಮಂತ್ರಿಗಳು ಆಸೀನರಾಗಿರುವುದನ್ನು ವಿಡಿಯೋದಲ್ಲಿ ನೋಡಬಹುದು.

ದೆಹಲಿ: ರಾಜ್ಯದ ಕಾಂಗ್ರೆಸ್ ನಾಯಕರ ಜೊತೆ ದೆಹಲಿ ಎಐಸಿಸಿ ಕಚೇರಿಯಲ್ಲಿ ಪಕ್ಷದ ಹೈಕಮಾಂಡ್ ಸಬೆ ನಡೆಸುತ್ತಿರುವುದು ಗೊತ್ತಿರುವ ಸಂಗತಿಯೇ. ಸಭೆ ಶುರುವಾಗುವ ಮೊದಲಿನ ಎಕ್ಸ್​ಕ್ಲ್ಯೂಸಿವ್ ಫುಟೇಜ್ ನಮಗೆ ಸಿಕ್ಕಿದೆ. ಹಾಲ್ ನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಬಲಭಾಗದಲ್ಲಿ ರಾಹುಲ್ ಗಾಂಧಿ (Rahul Gandhi) ಮತ್ತು ಎಡಭಾಗದಲ್ಲಿ ಪ್ರಧಾನ ಕಾರ್ಯದರ್ಶಿಗಳಾದ ಕೆಸಿ ವೇಣುಗೋಪಾಲ್ (KC Venugopal), ರಂದೀಪ್ ಸುರ್ಜೆವಾಲಾ (Randeep Surjewala) ಕುಳಿತಿರುವುದನ್ನು ನೋಡಬಹುದು. ರಾಹುಲ್ ಬಲಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಅವರ ಪಕ್ಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿ ಪರಮೇಶ್ವರ್ ಮತ್ತು ಇತರ ಮಂತ್ರಿಗಳು ಆಸೀನರಾಗಿರುವುದನ್ನು ನೋಡಬಹುದು. ರಾಹುಲ್ ಮತ್ತು ಖರ್ಗೆ ಎದುರುಗಡೆ ಮಂತ್ರಿಗಳು, ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ಕುಳಿತಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.