AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Stampede: ವಿವರಣೆ ಕೇಳಲು ಸಿಎಂ, ಡಿಸಿಎಂರನ್ನು ದೆಹಲಿಗೆ ಕರೆಸಿದ ಕಾಂಗ್ರೆಸ್ ಹೈಕಮಾಂಡ್

Bengaluru Stampede: ವಿವರಣೆ ಕೇಳಲು ಸಿಎಂ, ಡಿಸಿಎಂರನ್ನು ದೆಹಲಿಗೆ ಕರೆಸಿದ ಕಾಂಗ್ರೆಸ್ ಹೈಕಮಾಂಡ್

ಅರುಣ್​ ಕುಮಾರ್​ ಬೆಳ್ಳಿ
|

Updated on: Jun 10, 2025 | 10:18 AM

ಆರ್​ಸಿಬಿ ರಾಜ್ಯದ ಅಥವಾ ದೇಶದ ಒಂದು ತಂಡವಲ್ಲ, ಖಾಸಗಿ ಸಂಸ್ಥೆಯೊಂದರ ಕ್ಲಬ್ ಅದು. ಕ್ಲಬ್ ಬಗ್ಗೆ ಅಭಿಮಾನ ಮತ್ತು ಪ್ರೀತಿಯನ್ನು ರಾಜ್ಯದ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಸೇರಿದಂತೆ ಯಾರೂ ಬೇಕಾದರೂ ಇಟ್ಟುಕೊಳ್ಳಬಹುದು. ಅದರೆ ಸರ್ಕಾರೀ ಖರ್ಚಿನಲ್ಲಿ ಆರ್​ಸಿಬಿ ತಂಡದ ಆಟಗಾರರಿಗೆ ಸನ್ಮಾನ ಇಟ್ಟುಕೊಳ್ಳೋದು, ಅದರಲ್ಲಿ ಭಾಗಿಯಾಗೋದು ಸರಿಯಲ್ಲ ಎಂದು ವಿರೋಧ ಪಕ್ಷಗಳು ಹೇಳುತ್ತಿವೆ.

ಬೆಂಗಳೂರು, ಜೂನ್ 10: ಬೆಂಗಳೂರು ಕಾಲ್ತುಳಿತ ಪ್ರಕರಣ ಕರ್ನಾಟಕದ ನಾಯಕರಿಗೆ ಬೆಂಬಿಡದ ಭೂತವೆಂದರೆ ತಪ್ಪಲ್ಲ. ರಾಜ್ಯದ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಯನ್ನು ಅದು ಬಹಳ ದಿನಗಳವರೆಗೆ ಕಾಡಲಿದೆ. ವಿರೋಧ ಪಕ್ಷಗಳು ಸರ್ಕಾರವನ್ನು ಪ್ರತಿದಿನ ಇಕ್ಕಟ್ಟಿಗೆ ಸಿಕ್ಕಿಸುತ್ತಿವೆ ಅದು ಬೇರೆ ಪ್ರಶ್ನೆ, ಪಕ್ಷದ ಹೈಕಮಾಂಡ್​ ಸಹ ಘಟನೆಯ ಬಗ್ಗೆ ಉಗ್ರರೂಪ ತಳೆದಿದೆ ಮತ್ತು ವಿವರಣೆಗಾಗಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ (Siddaramaiah and DK Shivakumar) ಅವರನ್ನು ದೆಹಲಿಗೆ ಕರೆಸಿದೆ. ಇಂದು ಬೆಳಗ್ಗೆ ಅವರಿಬ್ಬರೂ ಒಂದೇ ವಿಮಾನದಲ್ಲಿ ದೆಹಲಿಗೆ ತೆರಳಿದರು.

ಇದನ್ನೂ ಓದಿ:   ಬೆಂಗಳೂರು ಕಾಲ್ತುಳಿತ ದುರಂತದ ವರದಿ ನೀಡುವಂತೆ ಜಸ್ಟೀಸ್ ಕುನ್ಹಾ ಆಯೋಗಕ್ಕೆ ಸರ್ಕಾರ ಸೂಚನೆ

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ