AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋಸ ಮಾಡಿ ಇಸ್ರೇಲ್​​-ಅಮೆರಿಕಾದಿಂದ ಖಮೇನಿ ಹತ್ಯೆ: ಬಿ.ಕೆ. ಹರಿಪ್ರಸಾದ್ ಆರೋಪ

ಮೋಸ ಮಾಡಿ ಇಸ್ರೇಲ್​​-ಅಮೆರಿಕಾದಿಂದ ಖಮೇನಿ ಹತ್ಯೆ: ಬಿ.ಕೆ. ಹರಿಪ್ರಸಾದ್ ಆರೋಪ

ಪ್ರಸನ್ನ ಗಾಂವ್ಕರ್​
| Edited By: |

Updated on: Mar 03, 2026 | 1:23 PM

Share

ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರು ಇರಾನ್​​ನ ಪರಮೋಚ್ಛ ನಾಯಕ ಖಮೇನಿ ಹತ್ಯೆಯನ್ನು ಮೋಸದಿಂದ ನಡೆಸಿದ ಕೃತ್ಯ ಎಂದು ಖಂಡಿಸಿದ್ದಾರೆ. ಇದು ಯುಎಸ್‌ಎ ಮತ್ತು ಇಸ್ರೇಲ್‌ನಿಂದ ವಿಶ್ವಸಂಸ್ಥೆ ಚಾರ್ಟರ್ ಉಲ್ಲಂಘನೆಯಾಗಿದೆ ಎಂದ ಅವರು, ಭಾರತದ ಅಲಿಪ್ತ ನೀತಿ ಮತ್ತು 1994ರಲ್ಲಿ ಕಾಶ್ಮೀರ ವಿಚಾರದಲ್ಲಿ ಇರಾನ್ ನೀಡಿದ ಬೆಂಬಲವನ್ನು ಸ್ಮರಿಸಿದ್ದಾರೆ.

ಬೆಂಗಳೂರು, ಮಾರ್ಚ್​ 03: ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರು ಇರಾನ್‌ನಲ್ಲಿ ನಡೆದ ಘಟನೆಯನ್ನು ಖಂಡಿಸಿದ್ದು, ಇರಾನ್​​ನ ಪರಮೋಚ್ಛ ನಾಯಕ ಖಮೇನಿಯನ್ನು ಮೋಸದಿಂದ ಹತ್ಯೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಇದು ವಿಶ್ವಸಂಸ್ಥೆಯ ಚಾರ್ಟರ್‌ನ ಸಂಪೂರ್ಣ ಉಲ್ಲಂಘನೆಯಾಗಿದ್ದು, ಒಂದು ರಾಷ್ಟ್ರದ ಸಾರ್ವಭೌಮತೆ ಮತ್ತು ಸ್ವಾತಂತ್ರ್ಯವನ್ನು ನಾಶಪಡಿಸುವ ಕೆಲಸವನ್ನು ಯುಎಸ್‌ಎ ಮತ್ತು ಇಸ್ರೇಲ್ ಮಾಡಿವೆ ಎಂದು ಅವರು ಹೇಳಿದ್ದಾರೆ. ಭಾರತದ ವಿದೇಶಾಂಗ ನೀತಿಯು ಪಂಡಿತ್ ಜವಾಹರಲಾಲ್ ನೆಹರೂ ಅವರ ಕಾಲದಿಂದಲೂ ಅಲಿಪ್ತ ರಾಷ್ಟ್ರಕೂಟದ ತತ್ವಗಳನ್ನು ಅನುಸರಿಸುತ್ತಿದೆ ಎಂದು ಹರಿಪ್ರಸಾದ್ ನೆನಪಿಸಿದ್ದು, 1994ರಲ್ಲಿ ಕಾಶ್ಮೀರ ವಿಚಾರದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಎಂದು ಇಸ್ಲಾಮಿಕ್ ಸಹಕಾರ ಸಂಘಟನೆ (OIC) ನಿರ್ಣಯವನ್ನು ಮಂಡಿಸಿದಾಗ ಇರಾನ್ ಭಾರತಕ್ಕೆ ಪ್ರಬಲವಾಗಿ ಬೆಂಬಲ ನೀಡಿತ್ತು ಎಂಬುದನ್ನು ಅವರು ಉಲ್ಲೇಖಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us