ಆರ್‌ಎಸ್‌ಎಸ್ ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ

Updated on: Dec 28, 2025 | 10:32 PM

ಬಿಜೆಪಿ ಮತ್ತು ಆರ್‌ಎಸ್‌ಎಸ್‌ನ ಸಂಘಟನಾ ಬಲದ ಬಗ್ಗೆ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಅವರ ಹೇಳಿಕೆಗಳು ಪಕ್ಷದೊಳಗೆ ಮತ್ತು ಅದರಾಚೆಗೂ ಬಿರುಗಾಳಿಯನ್ನು ಸೃಷ್ಟಿಸುತ್ತಲೇ ಇವೆ. ನಾಯಕರನ್ನು ನಿರ್ಮಿಸುವ ಸಾಮರ್ಥ್ಯಕ್ಕಾಗಿ ಆರ್‌ಎಸ್‌ಎಸ್ ಅನ್ನು ಹೊಗಳಿದ ದಿಗ್ವಿಜಯ ಸಿಂಗ್ ಅವರ ಹೇಳಿಕೆಗಳು ತೀವ್ರ ಚರ್ಚೆಗೆ ಗ್ರಾಸವಾಗಿವೆ. ಕೆಲವು ಕಾಂಗ್ರೆಸ್ ನಾಯಕರು ಅವರ ಅಭಿಪ್ರಾಯವನ್ನು ಬೆಂಬಲಿಸಿದರೆ, ಮಾಣಿಕ್ಕಂ ಟ್ಯಾಗೋರ್‌ನಂತಹ ಇತರ ಕಾಂಗ್ರೆಸ್ ನಾಯಕರು ಆರ್‌ಎಸ್‌ಎಸ್ ಅನ್ನು ತೀವ್ರವಾಗಿ ಟೀಕಿಸಿದ್ದಾರೆ.

ನವದೆಹಲಿ, ಡಿಸೆಂಬರ್ 28: ಬಿಜೆಪಿ ಮತ್ತು ಆರ್​​ಎಸ್​ಎಸ್​ ಅನ್ನು ಹೊಗಳುವ ಮೂಲಕ ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ (Digvijay Singh) ವಿವಾದ ಸೃಷ್ಟಿಸಿದ್ದರು. ದಿಗ್ವಿಜಯ ಸಿಂಗ್ ಎಕ್ಸ್ (ಹಿಂದಿನ ಟ್ವಿಟರ್)ನಲ್ಲಿ ಹಳೆಯ, ದಿನಾಂಕವಿಲ್ಲದ ಫೋಟೋವನ್ನು ಹಂಚಿಕೊಂಡಿದ್ದರು. ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ ಬಿಜೆಪಿಯ ಹಿರಿಯ ಎಲ್‌ಕೆ ಅಡ್ವಾಣಿ ಅವರೊಂದಿಗೆ ಇದ್ದಾರೆ. ಈ ಪೋಸ್ಟ್​​ನಲ್ಲಿ ದಿಗ್ವಿಜಯ್ ಸಿಂಗ್ ಆರ್‌ಎಸ್‌ಎಸ್‌ನ ಸಾಂಸ್ಥಿಕ ಬಲವನ್ನು ಶ್ಲಾಘಿಸಿದ್ದರು. ಇದು ಸಾಮಾನ್ಯ ಕಾರ್ಯಕರ್ತರನ್ನು ರಾಜಕೀಯ ನಾಯಕರನ್ನಾಗಿ ಪರಿವರ್ತಿಸಲು ಸಹಾಯ ಮಾಡಿದೆ ಎಂದು ಹೇಳಿದ್ದರು.

ಇದಕ್ಕೆ ಕಾಂಗ್ರೆಸ್ ನಾಯಕ ಮಾಣಿಕ್ಕಮ್ ಟ್ಯಾಗೋರ್ ಆರ್‌ಎಸ್‌ಎಸ್ ಅನ್ನು ಗುರಿಯಾಗಿಸಿಕೊಂಡು, ಅದನ್ನು ಅಲ್-ಖೈದಾಗೆ ಹೋಲಿಸುವ ಮೂಲಕ ವಿವಾದ ಸೃಷ್ಟಿಸಿದ್ದಾರೆ. ದಿಗ್ವಿಜಯ ಸಿಂಗ್ ಅವರ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ ಮಾಣಿಕ್ಕಂ ಟ್ಯಾಗೋರ್, ಆರ್‌ಎಸ್‌ಎಸ್ ಅನ್ನು ದ್ವೇಷದ ಮೇಲೆ ನಿರ್ಮಿಸಲಾದ ಸಂಘಟನೆ ಎಂದು ಲೇವಡಿ ಮಾಡಿದ್ದಾರೆ. ಆರ್​​ಎಸ್​​ಎಸ್​ ಅನ್ನು ಭಯೋತ್ಪಾದಕ ಗುಂಪು ಅಲ್-ಖೈದಾಗೆ ಹೋಲಿಕೆ ಮಾಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Dec 28, 2025 10:32 PM
Follow Us
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More