ತಹವ್ವೂರ್ ರಾಣಾ ಹಸ್ತಾಂತರ ಪ್ರಕ್ರಿಯೆಯಲ್ಲಿ ಕಾಂಗ್ರೆಸ್ ಪಾತ್ರವೂ ಇದೆ; ಪಿ. ಚಿದಂಬರಂ

Updated on: Apr 12, 2025 | 6:23 PM

ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಮುಂಬೈ ದಾಳಿಯ ಆರೋಪಿ ತಹವ್ವೂರ್ ರಾಣಾ ಹಸ್ತಾಂತರದಲ್ಲಿ ಯುಪಿಎ ಮತ್ತು ಪ್ರಸ್ತುತ ಸರ್ಕಾರಗಳ ಕೊಡುಗೆಗಳನ್ನು ಎತ್ತಿ ತೋರಿಸಿದ್ದಾರೆ. 2009ರಲ್ಲಿ ಈ ಪ್ರಕ್ರಿಯೆಯ ಪ್ರಾರಂಭವಾಗಿತ್ತು. ಈ ಪ್ರಕ್ರಿಯೆಯು 2009ರಲ್ಲಿ ಪ್ರಾರಂಭವಾಯಿತು ಮತ್ತು ನಂತರ 2011ರಲ್ಲಿ ಯುಎಸ್ ಗುಪ್ತಚರ ಇಲಾಖೆ ರಾಣಾನನ್ನು ಗುರುತಿಸಿದ ನಂತರ ಇದು ವೇಗವನ್ನು ಪಡೆದುಕೊಂಡಿತು. ವಾಸ್ತವವಾಗಿ ಅವರನ್ನು ಭಾರತಕ್ಕೆ ಹಸ್ತಾಂತರಿಸಲು ಬಹಳ ಸಮಯ ತೆಗೆದುಕೊಂಡಿತು. ಸುಮಾರು 13 ಅಥವಾ 14 ವರ್ಷಗಳು ಬೇಕಾಯಿತು ಎಂದಿದ್ದಾರೆ.

ನವದೆಹಲಿ, ಏಪ್ರಿಲ್ 12: ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಮುಂಬೈ ದಾಳಿಯ ಆರೋಪಿ ತಹವ್ವೂರ್ ರಾಣಾ ಹಸ್ತಾಂತರದಲ್ಲಿ ಯುಪಿಎ ಮತ್ತು ಪ್ರಸ್ತುತ ಸರ್ಕಾರಗಳ ಕೊಡುಗೆಗಳನ್ನು ಎತ್ತಿ ತೋರಿಸಿದ್ದಾರೆ. 2009ರಲ್ಲಿ ಈ ಪ್ರಕ್ರಿಯೆಯ ಪ್ರಾರಂಭವಾಗಿತ್ತು. 2011ರಲ್ಲಿ ಯುಎಸ್ ಗುಪ್ತಚರ ಇಲಾಖೆ ರಾಣಾನನ್ನು ಗುರುತಿಸಿದ ನಂತರ ಅದು ವೇಗ ಪಡೆಯಿತು. ಹಲವು ವರ್ಷಗಳ ಕಾನೂನು ಹೋರಾಟದ ನಂತರ, ಭಾರತಕ್ಕೆ ತಹವ್ವೂರ್ ರಾಣಾನನ್ನು ಅಮೆರಿಕದಿಂದ ಯಶಸ್ವಿಯಾಗಿ ಹಸ್ತಾಂತರಿಸಲಾಗಿದೆ. ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಹಸ್ತಾಂತರ ಪ್ರಕ್ರಿಯೆಯಲ್ಲಿ ಭಾಗಿಯಾಗಿರುವ ಸಂಸ್ಥೆಗಳಿಗೆ ಕೃತಜ್ಞತೆ ಸಲ್ಲಿಸಿದರು. ಇದನ್ನು ಪ್ರಾರಂಭಿಸಲು ಕಾರಣವಾದ ಕಾಂಗ್ರೆಸ್ ಸರ್ಕಾರದ ಕೊಡುಗೆಯನ್ನು ಸಹ ಅವರು ಎತ್ತಿ ತೋರಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More