AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ ಕಾಂಗ್ರೆಸ್ ಮುಖಂಡ, ವಿಡಿಯೋ ನೋಡಿ

ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ ಕಾಂಗ್ರೆಸ್ ಮುಖಂಡ, ವಿಡಿಯೋ ನೋಡಿ

ರಮೇಶ್ ಬಿ. ಜವಳಗೇರಾ
|

Updated on:Oct 12, 2025 | 7:03 PM

Share

ಏ ಕರಿ ಟೋಪಿ ಎಂಎಎಲ್ ಬಾರಪ್ಪ ಎಂದು ಡಿಕೆ ಶಿವಕುಮಾರ್ ಕರೆದಿದ್ದಾರೆ. ಇದರಿಂದ ರೊಚ್ಚಿಗೆದ್ದ ಮುನಿರತ್ನ ಡಿಕೆ ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಳಿಕ ಕಾರ್ಯಕ್ರಮಕ್ಕೆ ಆಹ್ವಾನ ನೀಡಿಲ್ಲ ಎಂದು ಆರೋಪಿಸಿ ಸ್ಥಳದಲ್ಲೇ ಏಕಾಂಗಿಯಾಗಿ ಧರಣಿ ಕುಳಿತರು. ಬಳಿಕ ಪೊಲೀಸರು ಅವರನ್ನು ಕರೆದೊಯ್ದರು. ಈ ವೇಳೆ ಗದ್ದಲದಲ್ಲಿ ಕಾಂಗ್ರೆಸ್ ಮುಖಂಡರೊಬ್ಬರು, ಮುನಿರತ್ನ ಧರಿಸಿದ್ದ ಆರ್ ಎಸ್​ಎಸ್ ಟೋಪಿಯನ್ನು ಕಿತ್ತೆಸೆದಿರುವ ಘಟನೆ ನಡೆದಿದೆ.

ಬೆಂಗಳೂರು, (ಆಕ್ಟೋಬರ್ 12): ಬೆಂಗಳೂರಿನ ಸಮಸ್ಯೆಗಳನ್ನು ಇತ್ಯರ್ಥಗೊಳಿಸಲು ಡಿಸಿಎಂ ಡಿ.ಕೆ.ಶಿವಕುಮಾರ್ (DCM DK Shivakumar) ವಿಶೇಷ ಪ್ರಯತ್ನದಲ್ಲಿದ್ದಾರೆ. ಅಂತೆಯೇ ಇವತ್ತು ಜೆಪಿ ಪಾರ್ಕ್​​ನಲ್ಲಿ ವಾಯು ವಿಹಾರ ನಡೆಸಿದರು. ಆಗ ಇದ್ದಕ್ಕಿದ್ದಂತೆ ದೊಡ್ಡ ಹೈಡ್ರಾಮಾ ನಡೆದಿದೆ. ಏ ಕರಿ ಟೋಪಿ ಎಂಎಎಲ್ ಬಾರಪ್ಪ ಎಂದು ಡಿಕೆ ಶಿವಕುಮಾರ್ ಕರೆದಿದ್ದಾರೆ. ಇದರಿಂದ ರೊಚ್ಚಿಗೆದ್ದ ಮುನಿರತ್ನ ಡಿಕೆ ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಳಿಕ ಕಾರ್ಯಕ್ರಮಕ್ಕೆ ಆಹ್ವಾನ ನೀಡಿಲ್ಲ ಎಂದು ಆರೋಪಿಸಿ ಸ್ಥಳದಲ್ಲೇ ಏಕಾಂಗಿಯಾಗಿ ಧರಣಿ ಕುಳಿತರು. ಬಳಿಕ ಪೊಲೀಸರು ಅವರನ್ನು ಕರೆದೊಯ್ದರು. ಈ ವೇಳೆ ಗದ್ದಲದಲ್ಲಿ ಕಾಂಗ್ರೆಸ್ ಮುಖಂಡರೊಬ್ಬರು, ಮುನಿರತ್ನ ಧರಿಸಿದ್ದ ಆರ್ ಎಸ್​ಎಸ್ ಟೋಪಿಯನ್ನು ಕಿತ್ತೆಸೆದಿರುವ ಘಟನೆ ನಡೆದಿದೆ.

Published on: Oct 12, 2025 07:03 PM
Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More