AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆಯ ರಾಮಮಂದಿರ ನಿರ್ಮಾಣದಲ್ಲಿ ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆದಿದೆ: ಪ್ರಿಯಾಂಕ್​​ ಖರ್ಗೆ

ಅಯೋಧ್ಯೆಯ ರಾಮಮಂದಿರ ನಿರ್ಮಾಣದಲ್ಲಿ ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆದಿದೆ: ಪ್ರಿಯಾಂಕ್​​ ಖರ್ಗೆ

ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on: Jul 06, 2026 | 12:43 PM

Share

ಅಯೋಧ್ಯೆ ರಾಮಮಂದಿರ ನಿರ್ಮಾಣದಲ್ಲಿ ಶೇ.40ರಷ್ಟು ಕಮಿಷನ್ ನಡೆದಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಕಲಬುರಗಿಯಲ್ಲಿ ಆರೋಪಿಸಿದ್ದಾರೆ. ನಿರ್ಮಾಣ ಉಸ್ತುವಾರಿ ಗೋಪಾಲ್ ಜಿ ತಮ್ಮ ಅಳಿಯನಿಗೆ ಗುತ್ತಿಗೆ ನೀಡಿದ್ದಾರೆ. ಬಿಜೆಪಿ ಈ ಕಮಿಷನ್ ಹಗರಣಕ್ಕೆ ಕಾರಣವಾಗಿದೆ ಎಂದು ಹೇಳಿದ ಖರ್ಗೆ, ರಾಮಮಂದಿರ ಟ್ರಸ್ಟ್ ಸದಸ್ಯರು ಆರ್‌ಎಸ್‌ಎಸ್ ತರಬೇತಿ ಪಡೆದಿದವರು ಎಂದು ತಿಳಿಸಿದ್ದಾರೆ.

ಕಲಬುರಗಿ, ಜುಲೈ 06: ಅಯೋಧ್ಯೆಯ ರಾಮಮಂದಿರ ನಿರ್ಮಾಣದಲ್ಲಿ ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆದಿದೆ ಎಂದು ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ ಆರೋಪಿಸಿದ್ದಾರೆ. ರಾಮಮಂದಿರ ನಿರ್ಮಾಣದ ಉಸ್ತುವಾರಿ ವಹಿಸಿದ್ದ ಗೋಪಾಲ್ ಜಿ ಅವರು ತಮ್ಮ ಅಳಿಯನಿಗೆ ಶೇ.40ರಷ್ಟು ಕಮಿಷನ್ ಪಡೆದು ಗುತ್ತಿಗೆಯನ್ನು ನೀಡಿದ್ದಾರೆ ಎಂದು ಖರ್ಗೆ ಹೇಳಿದ್ದಾರೆ. ಬಿಜೆಪಿ ಅಯೋಧ್ಯೆಯಲ್ಲಿ ಕಮಿಷನ್ ಪಡೆದಿದೆ ಎಂದು ದೂರಿದ ಅವರು, ಅಯೋಧ್ಯೆ ರಾಮಮಂದಿರ ಟ್ರಸ್ಟ್‌ನ ನಿರ್ವಹಣೆಯ ಬಗ್ಗೆಯೂ ಪ್ರಶ್ನಿಸಿದ್ದಾರೆ. ಟ್ರಸ್ಟ್ ಸಭೆ ಯಾವ ವಿಚಾರಕ್ಕೆ ನಡೆಯುತ್ತಿದೆ? ಚಂಪತ್ ರಾಯ್ ಮತ್ತು ಗೋಪಾಲ್ ಮಿಶ್ರಾ ಅವರ ರಾಜೀನಾಮೆ ಬಗ್ಗೆ ಚರ್ಚಿಸಲು ಅಲ್ಲವೇ. ಇವರು ಆರ್‌ಎಸ್‌ಎಸ್‌ನಿಂದ ತರಬೇತಿ ಪಡೆದಿದ್ದಾರೆ ಎಂದು ಅವರು ಉಲ್ಲೇಖಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us