ದೆಹಲಿಯ ಪ್ರಮುಖ ತರಕಾರಿ ಮಾರ್ಕೆಟ್ ಆಜಾದ್ ಮಂಡಿಗೆ ಭೇಟಿ ನೀಡಿ ವರ್ತಕರೊಂದಿಗೆ ಮಾತಾಡಿದ ರಾಹುಲ್ ಗಾಂಧಿ

ಅರುಣ್​ ಕುಮಾರ್​ ಬೆಳ್ಳಿ

Updated on: Aug 01, 2023 | 12:07 PM

ಮಂಗಳವಾರ ಭೆಳಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದೆಹಲಿಯ ಪ್ರಮುಖ ತರಕಾರಿ ಮಾರುಕಟ್ಟೆಯಾಗಿರುವ ಆಜಾದ್ ಮಂಡಿಗೆ ಭೇಟಿ ನೀಡಿ ಅಲ್ಲಿನ ವ್ಯಾಪಾರಿಗಳೊಂದಿಗೆ ಮಾತುಕತೆ ನಡೆಸಿದರು.

ದೆಹಲಿ: ಟೊಮೆಟೊ ಮತ್ತು ಇತರ ತರಕಾರಿಗಳ ಬೆಲೆ ಕೇವಲ ಕರ್ನಾಟಕ ಮಾತ್ರವಲ್ಲ ಇಡೀ ದೇಶದಲ್ಲೇ ಜನರನ್ನು ಕಂಗಾಲಾಗಿಸಿದೆ. ಮಂಗಳವಾರ ಬೆಂಗಳೂರು ನಗರದ ಕೇಜಿ ಟೊಮೆಟೊ (tomato) ಬೆಲೆ ರೂ. 180-190 ಇತ್ತು. ರಾಷ್ಟ್ರದ ರಾಜಧಾನಿಯಲ್ಲಿ ರೂ. 200ಕ್ಕಿಂತ ಹೆಚ್ಚಿನ ಬೆಲೆಗೆ ಟೊಮೆಟೊ ಮಾರಾಟವಾಗುತ್ತಿದೆ. ಇದೇ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi ) ದೆಹಲಿಯ ಪ್ರಮುಖ ತರಕಾರಿ ಮಾರುಕಟ್ಟೆಯಾಗಿರುವ ಆಜಾದ್ ಮಂಡಿಗೆ (Delhi Azad Mandi) ಭೇಟಿ ನೀಡಿ ವಸ್ತುಸ್ಥಿತಿ ಅರಿಯುವ ಪ್ರಯತ್ನ ಮಾಡಿದರು. ಮೊಬೈಲ್ ನಲ್ಲಿ ಸೆರೆಹಿಡಿದಿರುವ ಈ ವಿಡಿಯೋದಲ್ಲಿ ರಾಹುಲ್ ಗಾಂಧಿ ಮಂಡಿಯಲ್ಲಿನ ವರ್ತಕರೊಂದಿಗೆ ಸಂವಾದ ನಡೆಸುತ್ತಿರುವುದನ್ನು ನೋಡಬಹುದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.