Karnataka Assembly Polls: ಕಾಂಗ್ರೆಸ್ ನಾಯಕರು ಕ್ರಿಮಿನಲ್ ಮತ್ತು ರಾಷ್ಟ್ರದ್ರೋಹಿಗಳ ಜೊತೆ ಕೈಜೋಡಿಸಿದ್ದಾರೆ: ಶೋಭಾ ಕರಂದ್ಲಾಜೆ
ಕೇರಳದಲ್ಲಿ ಹಸುವೊಂದನ್ನು ನಡುರಸ್ತೆಯಲ್ಲಿ ವಧಿಸಿ ಅದರೊಂದಿಗೆ ರಕ್ತದೋಕುಳಿಯಾಡಿದ ರಿಜಿಲ್ ಮಕ್ಕುಟ್ಟಿಯನ್ನ ಯುವ ಕಾಂಗ್ರೆಸ್ ಮೋರ್ಚಾದ ಅಧ್ಯಕ್ಷ ಮಾಡಲಾಗುತ್ತದೆ ಎಂದು ಶೋಭಾ ಹೇಳಿದರು.
ಬೆಂಗಳೂರು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ (Siddaramaiah) ಮತ್ತು ಡಿಕೆ ಶಿವಕುಮಾರ್ (DK Shivakumar) ವಿರುದ್ಧ ಕಿಡಿಕಾರಿದ್ದಾರೆ. ಕಾಂಗ್ರೆಸ್ ಪಕ್ಷ ಮತ್ತು ಅದರ ನಾಯಕರು ಕ್ರಿಮಿನಲ್ ಗಳ, ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ತೊಡಗುವವರ ಮತ್ತು ರಾಷ್ಟ್ರವಿರೋಧಿಗಳ ಜೊತೆ ಕೈಜೋಡಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಿದ್ದರಾಮಯ್ಯನವರು ಗೋಹತ್ಯೆ ನಿಷೇಧ ಕಾನೂನನ್ನು ವಾಪಸ್ಸು ಪಡೆಯುವುದಾಗಿ ಹೇಳುತ್ತಾರೆ. 5-6 ವರ್ಷಗಳ ಹಿಂದೆ ಕೇರಳದಲ್ಲಿ ಹಸುವೊಂದನ್ನು ನಡುರಸ್ತೆಯಲ್ಲಿ ವಧಿಸಿ ಅದರೊಂದಿಗೆ ರಕ್ತದೋಕುಳಿಯಾಡಿದ ರಿಜಿಲ್ ಮಕ್ಕುಟ್ಟಿಯನ್ನ ಯುವ ಕಾಂಗ್ರೆಸ್ ಮೋರ್ಚಾದ ಅಧ್ಯಕ್ಷ ಮಾಡಲಾಗುತ್ತದೆ. ಅವರೊಂದಿಗೆ ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಫೋಟೋ ತೆಗೆಸಿಕೊಳ್ಳುತ್ತಾರೆ ಎಂದು ಹೇಳಿದ ಶೋಭಾ ಫೋಟೋಗಳನ್ನು ಮಾಧ್ಯಮದವರಿಗೆ ತೋರಿಸಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ್ಯಾಪಿಡೋ ಆ್ಯಪ್ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
