ಕಾಂಗ್ರೆಸ್ ನಾಯಕರು ಮಹಾತ್ಮಾ ಗಾಂಧಿ ಪ್ರತಿಮೆ ಕೆಳಗೆ ಕೂತು ಪರಿಷ್ಕೃತ ಪಠ್ಯಪುಸ್ತಕಗಳ ವಿರುದ್ಧ ಪ್ರತಿಭಟನೆ ನಡೆಸಿದರು
ಸಿದ್ದರಾಮಯ್ಯ, ಡಿಕೆ ಶಿವಕುಮಾರ, ಬಕೆ ಹರಿಪ್ರಸಾದ ಅವರಲ್ಲದೆ ಇನ್ನೂ ಹಲವಾರು ಕಾಂಗ್ರೆಸ್ ನಾಯಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಪ್ರತಿಭಡನೆ ನಡೆಸುತ್ತಿರುವ ಕಾಂಗ್ರೆಸ್ ನಾಯಕರು
ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ನಾಯಕರು ಗುರುವಾರದಂದು ವಿಧಾನ ಸೌಧ ಆವರಣದಲ್ಲಿರುವ ಮಹಾತ್ಮಾ ಗಾಂಧಿ (Mahatma Gandhi) ಪ್ರತಿಮೆ ಕೆಳಗಡೆ ಕೂತು; ಪರಿಷ್ಕೃತ ಪಠ್ತಪುಸ್ತಕಗಳಲ್ಲಿ ಭಗತ್ ಸಿಂಗ್, ಕುವೆಂಪು, ಡಾ ಬಿ ಆರ್ ಅಂಬೇಡ್ಕರ್ ಮತ್ತು ನಾರಾಯಣ ಗುರು ಮೊದಲಾದ ಮಹಾನುಭಾವರಿಗೆ ಅವಮಾನ ಮಾಡಿದ ಪರಿಷ್ಕರಣ ಸಮಿತಿ (revision committee) ಮತ್ತು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಸಿದ್ದರಾಮಯ್ಯ, ಡಿಕೆ ಶಿವಕುಮಾರ, ಬಕೆ ಹರಿಪ್ರಸಾದ ಅವರಲ್ಲದೆ ಇನ್ನೂ ಹಲವಾರು ಕಾಂಗ್ರೆಸ್ ನಾಯಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.




