ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿ ವಿರುದ್ಧ ನಾಳೆ ರಾಜಭವನ ಚಲೋ: ಜಿ ಪರಮೇಶ್ವರ್

ಅರುಣ್​ ಕುಮಾರ್​ ಬೆಳ್ಳಿ

Updated on: Aug 30, 2024 | 12:31 PM

ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಅನುಮತಿಯನ್ನು ಸರ್ಕಾರ ಈಗಾಗಲೇ ಹೈಕೋರ್ಟ್ ನಲ್ಲಿ ಪ್ರಶ್ನಿಸಿದ್ದು ವಿಚಾರಣೆ ಜಾರಿಯಲ್ಲಿದೆ, ಅದರೂ ರಾಜ್ಯಪಾಲರು ತೆಗೆದುಕೊಂಡ ನಿರ್ಧಾರ ತಪ್ಪು ಅಂತ ಮನವರಿಕೆ ಮಾಡಿಕೊಂಡುವ ಪ್ರಯತ್ನ ಮಾಡುತ್ತೇವೆ ಎಂದು ಪರಮೇಶ್ವರ್ ಹೇಳಿದರು.

ಬೆಂಗಳೂರು: ನಾಳೆ ಕಾಂಗ್ರೆಸ್ ನಾಯಕರು, ಶಾಸಕರು, ಸಂಸದರು ಮತ್ತು ಮಂತ್ರಿಗಳು ವಿಧಾನಸೌಧದಿಂದ ರಾಜಭವನನದವರೆಗೆ ಜಾಥಾ ನಡೆಸಿ ಮುಡಾ ಪ್ರಕರಣದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ನೀಡಿರುವ ಪ್ರಾಸಿಕ್ಯೂಷನ್ ಅನುಮತಿಯನ್ನು ಪುನರ್ ಪರಿಶೀಲಿಸುವಂತೆ ಮನವಿ ಪತ್ರ ಸಲ್ಲಿಸಲಾಗುವುದು ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಸಿಎಂ ವಿರುದ್ಧದ ಮುಡಾ ಪ್ರಕರಣದ ಆದೇಶ ಕಾಯ್ದಿರಿಸಿದ ಕೋರ್ಟ್: ವಾದ-ಪ್ರತಿವಾದ ಹೇಗಿತ್ತು? ಇಲ್ಲಿದೆ ನೋಡಿ

Published on: Aug 30, 2024 12:24 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.