ಕಾಂಗ್ರೆಸ್​ನಿಂದ ಹೋದವರನ್ನು ಬಿಜೆಪಿ ಯೂಸ್ ಅಂಡ್ ಥ್ರೋ ರೀತಿಯಲ್ಲಿ ಟ್ರೀಟ್ ಮಾಡುತ್ತಿದೆ: ಡಿಕೆ ಶಿವಕುಮಾರ್

ಅರುಣ್​ ಕುಮಾರ್​ ಬೆಳ್ಳಿ

Updated on: Jan 31, 2025 | 1:16 PM

ಕಾಂಗ್ರೆಸ್​ನಿಂದ ಬಿಜೆಪಿಗೆ ಹೋದವರಿಗೆ ಯಾವ ಸ್ಥಾನಮಾನ ನೀಡಲಾಗುತ್ತಿದೆ ಅಂತ ಗೊತ್ತಿದೆ, ಅವರನ್ನು ಯೂಸ್ ಅಂಡ್ ಥ್ರೋ ಪದಾರ್ಥಗಳ ಹಾಗೆ ಬಳಸಿಕೊಳ್ಳಲಾಗುತ್ತಿದೆ, ಒಂದು ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿಕೊಂಡು ಬೆಳೆದವರು ಮತ್ತೊಂದು ಪಕ್ಷದ ಸಿದ್ಧಾಂತಗಳಿಗೆ ಒಗ್ಗಿಕೊಳ್ಳುವುದು ಕಷ್ಟವಾಗುತ್ತದೆ, ಅವರ ಪಕ್ಷದಲ್ಲಿ ಏನಾದರೂ ಮಾಡಿಕೊಳ್ಳಲಿ ಅದು ಕಾಂಗ್ರೆಸ್​ಗೆ ಸಂಬಂಧವಿಲ್ಲ ಎಂದು ಶಿವಕುಮಾರ್ ಹೇಳುತ್ತಾರೆ.

ಶಿವಮೊಗ್ಗ: ನಗರದಲ್ಲಿಂದು ಮಾಧ್ಯಮಗಳೊಡನೆ ಮಾತಾಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬಿಜೆಪಿಯಲ್ಲಿ ನಡೆಯುತ್ತಿರುವ ಆಂತರಿಕ ಕಚ್ಚಾಟದ ಬಗ್ಗೆ ಮಾತಾಡುತ್ತ, ಕಾಂಗ್ರೆಸ್ ಪಕ್ಷವು ಬೇರೆ ಪಕ್ಷಗಳಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಮೇಲೆ ಅವಲಂಬನೆಗೊಂಡು ಸರ್ಕಾರ ನಡೆಸುತ್ತಿಲ್ಲ, ತಮ್ಮ ಪಕ್ಷದ ಗುರಿ ನಾಡಿನ ಜನತೆಯು ಸರ್ಕಾರದ ಮೇಲಿಟ್ಟಿರುವ ವಿಶ್ವಾಸವನ್ನು ಉಳಿಸಿಕೊಳ್ಳುವುದಾಗಿದೆ ಎಂದು ಹೇಳಿದರು. ಬಿಜೆಪಿಯವರಿಗೆ ಜನ ಅಧಿಕಾರ ನೀಡಿದಾಗ ಅವರಲ್ಲಿ ಸರ್ಕಾರ ನಡೆಸುವ ಅನುಭವ ಇರಲಿಲ್ಲ, ಈಗ ವಿರೋಧ ಪಕ್ಷದಲ್ಲಿ ಕೂತ್ಕೊಂಡು ಕೆಲಸ ಮಾಡಿ ಅಂತ ಜನ ಹೇಳಿದ್ದಾರೆ, ಬಿಜೆಪಿಯಲ್ಲಿನ ಒಳಜಗಳಗಳು ಯಾವತ್ತೂ ಇದ್ದಿದ್ದೇ ಎಂದು ಶಿವಕುಮಾರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಕೇಂದ್ರ ಬಜೆಟ್​​ನಲ್ಲಿ ಬೆಂಗಳೂರಿಗೆ ಆದ್ಯತೆ ನೀಡಿ: ನಿರ್ಮಲಾ ಸೀತಾರಾಮನ್​​ಗೆ ಡಿಕೆ ಶಿವಕುಮಾರ್​​ ಪತ್ರ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.