ಸಚಿವ ಚಲುವರಾಯಸ್ವಾಮಿ ಸಮ್ಮುಖದಲ್ಲಿ ರೌಡಿ ಶೀಟರ್​ನನ್ನು ಸನ್ಮಾನ ಮಾಡಿಸಿದ ಕಾಂಗ್ರೆಸ್ ಶಾಸಕ ಬಂಡಿ ಸಿದ್ದೇಗೌಡ!

ಅರುಣ್​ ಕುಮಾರ್​ ಬೆಳ್ಳಿ

Updated on: Oct 19, 2023 | 12:20 PM

ಆಹ್ವಾನ ಪತ್ರಿಕೆಯಲ್ಲಿ ಬುಲ್ಲಿಯ ಹೆಸರಿರದಿದ್ದರೂ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಬುಲ್ಲಿಯನ್ನು ವೇದಿಕೆಗೆ ಕರೆದು ಸತ್ಕರಿಸಿದ್ದಾರೆ. ಆರೋಪಗಳಿದ್ದ ಮಾತ್ರಕ್ಕೆ ಅಪರಾಧಿಯಲ್ಲ ಎಂಬ ಸಮರ್ಥನೆಯನ್ನು ಬಂಡಿಸಿದ್ದೇಗೌಡ ನೀಡಿದ್ದು ಶಾಸಕನ ವಿರುದ್ಧವೂ ಕೇಂದ್ರ ತನಿಖಾ ದಳ (ಸಿಬಿಐ) ಪ್ರಕರಣವೊಂದನ್ನು ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ.

ಮಂಡ್ಯ: ವಿಧಾನ ಸಭಾ ಚುನಾವಣೆ ಸಂದರ್ಭದಲ್ಲಿ ಕೆಲ ಬಿಜೆಪಿ ನಾಯಕರ ಜೊತೆ ರೌಡಿಶೀಟರ್ ಗಳು ಕಾಣಿಸಿಕೊಂಡಾಗ ಆಕಾಶ ಪಾತಾಳ ಒಂದಾಗುವ ಹಾಗೆ ಚೀರಾಡಿದ್ದ ಕಾಂಗ್ರೆಸ್ ನಾಯಕರು ಅಧಿಕಾರಕ್ಕೆ ಬಂದ ಮೇಲೆ ಗೂಂಡಾಗಳನ್ನು ಸನ್ಮಾನ ಮಾಡಿ ಕೃತಾರ್ಥರಾಗುತ್ತಿದ್ದಾರೆ. ಕಳೆದ ರಾತ್ರಿ, ಕೆಆರ್ ಎಸ್ ನೃತ್ಯ ಕಾರಂಜಿ ಉದ್ಘಾಟನೆ ಮಾಡುವ ವೇಳೆ ಶ್ರೀರಂಗಟ್ಟಣದ ಕಾಂಗ್ರೆಸ್ ಶಾಸಕ ಬಂಡಿ ಸಿದ್ದೇಗೌಡ (Bandi Siddegowda), ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ಮತ್ತು ಈ ಭಾಗದ ಕುಖ್ಯಾತ ರೌಡಿ (notorious rowdy) ಎನಿಸಿಕೊಂಡಿರುವ ದೇವರಾಜು ಅಲಿಯಾಸ್ ಬುಲ್ಲಿಗೆ (Devaraj@bulli) ಸನ್ಮಾನ ಮಾಡಿಸಿದ್ದಾರೆ. ಕೃಷಿ ಸಚಿವ ಎನ್ ಚಲುವರಾಯಸ್ವಾಮಿ (N Cheluvarayaswamy) ಸಮ್ಮುಖ ಮತ್ತು ಮಂಡ್ಯ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿಯ ಉಪಸ್ಥಿತಿಯಲ್ಲಿ ‘ಗಣ್ಯವಕ್ತಿ’ಗೆ ಸನ್ಮಾನ ಮಾಡಲಾಗಿದೆ. ಆಹ್ವಾನ ಪತ್ರಿಕೆಯಲ್ಲಿ ಬುಲ್ಲಿಯ ಹೆಸರಿರದಿದ್ದರೂ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಬುಲ್ಲಿಯನ್ನು ವೇದಿಕೆಗೆ ಕರೆದು ಸತ್ಕರಿಸಿದ್ದಾರೆ. ಆರೋಪಗಳಿದ್ದ ಮಾತ್ರಕ್ಕೆ ಅಪರಾಧಿಯಲ್ಲ ಎಂಬ ಸಮರ್ಥನೆಯನ್ನು ಬಂಡಿಸಿದ್ದೇಗೌಡ ನೀಡಿದ್ದು ಶಾಸಕನ ವಿರುದ್ಧವೂ ಕೇಂದ್ರ ತನಿಖಾ ದಳ (ಸಿಬಿಐ) ಪ್ರಕರಣವೊಂದನ್ನು ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.