Karnataka Assembly Polls: ದೆಹಲಿಯಲ್ಲಿ ಸಿದ್ದರಾಮಯ್ಯ ಸಮ್ಮುಖ ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆಗೆ ಮುಂದಾದ ಶಾಸಕ ಬೈರತಿ ಸುರೇಶ್

ಅರುಣ್​ ಕುಮಾರ್​ ಬೆಳ್ಳಿ

Updated on: Apr 04, 2023 | 12:11 PM

ರೊಚ್ಚಿಗೆದ್ದ ಮಾಧ್ಯಮ ಪ್ರತಿನಿಧಿಗಳು ತಿರುಗಿಬಿದ್ದಾಗ ಸಿದ್ದರಾಮಯ್ಯನವರು ಸಮಾಧಾನಪಡಿಸುತ್ತಾರೆ. ಸುರೇಶ್ ಏನೋ ಹೇಳಲು ಪ್ರಯತ್ನಿಸಿದಾಗ ವಿರೋಧ ಪಕ್ಷದ ನಾಯಕ ಸುಮ್ನಿರಯ್ಯ ಅಂತ ಗದರುತ್ತಾರೆ.

ನವದೆಹಲಿ: ಸದಾ ಸಿದ್ದರಾಮಯ್ಯ (Siddaramaiah) ಹಿಂದೆ ಸುತ್ತುತ್ತಾ ಮೈಲೇಜ್ ಗಿಟ್ಟಿಸಲು ಪ್ರಯತ್ನಿಸುವ ಹೆಬ್ಬಾಳ ಕ್ಷೇತ್ರದ ಕಾಂಗ್ರೆಸ್ ಶಾಸಕ ಭೈರತಿ ಸುರೇಶ್ (Byrathi Suresh) ಮಾಧ್ಯಮದವರನ್ನು ಹಗುರವಾಗಿ ಪರಿಗಣಿಸಿದಂತಿದೆ. ದೆಹಲಿಯಲ್ಲಿಂದು ಸಿದ್ದರಾಮಯ್ಯ ಮಾಧ್ಯಮ ಪ್ರತಿನಿಧಿಗಳ (media persons) ಜೊತೆ ಮಾತಾಡುತ್ತಿದ್ದಾಗ ಈವಯ್ಯಗೆ ಅದ್ಯಾಕೆ ಬೆಂಕಿಹೊತ್ತಿಕೊಂಡಿತೋ? ಪತ್ರಕರ್ತರು ಸಿದ್ದರಾಮಯ್ಯನವರಿಗೆ ಕೇಳಿದ ಪ್ರಶ್ನೆಯೊಂದಕ್ಕೆ ಈ ಆಸಾಮಿ ಕೊತಕೊತ ಕುದಿಯಲಾರಂಭಿಸಿ ಹಲ್ಲೆಗೆ ಮುಂದಾಗುತ್ತಾರೆ. ರೊಚ್ಚಿಗೆದ್ದ ಮಾಧ್ಯಮ ಪ್ರತಿನಿಧಿಗಳು ತಿರುಗಿಬಿದ್ದಾಗ ಸಿದ್ದರಾಮಯ್ಯನವರು ಸಮಾಧಾನಪಡಿಸುತ್ತಾರೆ. ಸುರೇಶ್ ಏನೋ ಹೇಳಲು ಪ್ರಯತ್ನಿಸಿದಾಗ ವಿರೋಧ ಪಕ್ಷದ ನಾಯಕ ಸುಮ್ನಿರಯ್ಯ ಅಂತ ಗದರುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.