AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಜಾ ಸೇವಾ ಆಂದೋಲನದಲ್ಲಿ ಕಾಂಗ್ರೆಸ್ ಶಾಸಕ ಎಚ್.ವಿ. ವೆಂಕಟೇಶ್ ದರ್ಪ: ಜನರಿಗೆ ಧಮ್ಕಿ ಹಾಕಿದ ವಿಡಿಯೋ ವೈರಲ್

ಪ್ರಜಾ ಸೇವಾ ಆಂದೋಲನದಲ್ಲಿ ಕಾಂಗ್ರೆಸ್ ಶಾಸಕ ಎಚ್.ವಿ. ವೆಂಕಟೇಶ್ ದರ್ಪ: ಜನರಿಗೆ ಧಮ್ಕಿ ಹಾಕಿದ ವಿಡಿಯೋ ವೈರಲ್

ಜಗದೀಶ ಬಿ.
| Edited By: |

Updated on: Sep 07, 2026 | 12:09 PM

Share

ಪಾವಗಡ ತಾಲೂಕಿನ ವೈ.ಎನ್. ಹೊಸಕೋಟೆಯಲ್ಲಿ ನಡೆದ ಪ್ರಜಾ ಸೇವಾ ಆಂದೋಲನದಲ್ಲಿ ಕಾಂಗ್ರೆಸ್ ಶಾಸಕ ಎಚ್.ವಿ. ವೆಂಕಟೇಶ್ ಅವರು ಜನರ ಸಮಸ್ಯೆಗೆ ಕಿವಿಗೊಡದೆ ದರ್ಪ ತೋರಿರುವ ಆರೋಪ ಕೇಳಿಬಂದಿದೆ. ಸಂತೆ ಮೈದಾನ ಒತ್ತುವರಿ ಬಗ್ಗೆ ಮಾಹಿತಿ ನೀಡಲು ಬಂದ ವ್ಯಕ್ತಿಯೊಬ್ಬರಿಗೆ ಅರ್ಜಿ ಕೊಟ್ಟು ಹೋಗುವಂತೆ ಧಮ್ಕಿ ಹಾಕಿದ್ದಾರೆ ಎನ್ನಲಾಗಿದ್ದು, ಸಿಎಂ ಡಿಕೆಶಿ ಮಹತ್ವಾಕಾಂಕ್ಷೆಯ ಕಾರ್ಯಕ್ರಮದಲ್ಲಿ ಶಾಸಕರ ಈ ನಡೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

ತುಮಕೂರು, ಸೆಪ್ಟೆಂಬರ್​​ 07: ಪಾವಗಡ ತಾಲೂಕಿನ ವೈ.ಎನ್. ಹೊಸಕೋಟೆಯಲ್ಲಿ ನಡೆದ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮದಲ್ಲಿ ಪಾವಗಡ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಚ್.ವಿ. ವೆಂಕಟೇಶ್ ಅವರು ಸಾರ್ವಜನಿಕರೊಂದಿಗೆ ದರ್ಪದಿಂದ ವರ್ತಿಸಿರುವ ಆರೋಪ ಕೇಳಿಬಂದಿದೆ. ತಮ್ಮ ಸಮಸ್ಯೆ ಹೇಳಲು ಬಂದ ಜನರಿಗೆ ಅವರು ಧಮ್ಕಿ ಹಾಕಿದ್ದಾರೆ ಎನ್ನಲಾಗಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅರ್ಜಿ ಕೊಟ್ಟು ಹೋಗಬೇಕು. ತಿರುಗಾ ಮಾತನಾಡಿದರೆ ಅಷ್ಟೇ, ಪರಿಶೀಲನೆ ಮಾಡುತ್ತೇವೆ, ಹೋಗಿ ಎಂದು ಶಾಸಕರು ಹೇಳಿರೋದು ವಿಡಿಯೋದಲ್ಲಿ ಕಂಡುಬಂದಿದೆ. ಜನಪ್ರತಿನಿಧಿಯ ಈ ನಡೆಯೀಗ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us