AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆ-ತಾಯಿ ಸಮಾಧಿ ಪಕ್ಕವೇ ಶಾಸಕ ಹೆಚ್​.ವೈ. ಮೇಟಿ ಅಂತ್ಯಕ್ರಿಯೆ

ತಂದೆ-ತಾಯಿ ಸಮಾಧಿ ಪಕ್ಕವೇ ಶಾಸಕ ಹೆಚ್​.ವೈ. ಮೇಟಿ ಅಂತ್ಯಕ್ರಿಯೆ

ರವಿ ಹೆಚ್ ಮೂಕಿ, ಕಲಘಟಗಿ
| Updated By: ಪ್ರಸನ್ನ ಹೆಗಡೆ|

Updated on:Nov 05, 2025 | 5:20 PM

Share

ಶಾಸಕ ಹೆಚ್.ವೈ.ಮೇಟಿ (79) ಅವರ ಅಂತ್ಯಕ್ರಿಯೆ ಹುಟ್ಟೂರಾದ ತಿಮ್ಮಾಪುರ ಗ್ರಾಮದ ಜಮೀನಿನಲ್ಲಿ ನಡೆಯಿತು. ತಂದೆ-ತಾಯಿ ಸಮಾಧಿ ಪಕ್ಕದಲ್ಲೇ ಹೆಚ್​.ವೈ.ಮೇಟಿ ಅವರನ್ನ ಕುರುಬ ಸಮುದಾಯದ ಸಂಪ್ರದಾಯದಂತೆ ಮಣ್ಣು ಮಾಡಲಾಗಿದ್ದು, ಸಿಎಂ ಸಿದ್ದರಾಮಯ್ಯ ಸೇರಿ ರಾಜ್ಯ ಸರ್ಕಾರದ ಹಲವು ಸಚಿವರು ಈ ವೇಳೆ ಉಪಸ್ಥಿತರಿದ್ದರು. ಶಾಸಕರ ಅಂತ್ಯಕ್ರಿಯೆಗೆ ಜನ ಸಾಗರವೇ ಹರಿದುಬಂದಿತ್ತು.

ಬಾಗಲಕೋಟೆ, ನವೆಂಬರ್​ 05: ಅನಾರೋಗ್ಯದ ಹಿನ್ನಲೆ ಮರತಪಟ್ಟ ಶಾಸಕ ಹೆಚ್.ವೈ.ಮೇಟಿ (79) ಅವರ ಅಂತ್ಯಕ್ರಿಯೆ ಹುಟ್ಟೂರಾದ ತಿಮ್ಮಾಪುರ ಗ್ರಾಮದ ಜಮೀನಿನಲ್ಲಿ ನಡೆಯಿತು. ಕುರುಬ ಸಮುದಾಯದ ಸಂಪ್ರದಾಯದಂತೆ ನಡೆದ ಅಂತ್ಯಸಂಸ್ಕಾರ ನಡೆದಿದ್ದು, ತಂದೆ-ತಾಯಿ ಸಮಾಧಿ ಪಕ್ಕದಲ್ಲೇ ಹೆಚ್​.ವೈ.ಮೇಟಿ ಅವರನ್ನ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವದೊಂದಿಗೆ ನಡೆಯಿತು. ಪೊಲೀಸರು ಮೂರು ಸುತ್ತು ಕುಶಾಲತೋಪು ಸಿಡಿಸಿ ಗೌರವ ಸಲ್ಲಿಸಿದ್ದು, ಹೆಚ್.ವೈ.ಮೇಟಿ ಪುತ್ರರಿಗೆ ರಾಷ್ಟ್ರಧ್ವಜವನ್ನ ಸಿಎಂ ಸಿದ್ದರಾಮಯ್ಯ ಹಸ್ತಾಂತರಿಸಿದರು.ಹೆಚ್​.ವೈ.ಮೇಟಿ ಅಂತ್ಯಕ್ರಿಯೆಯಲ್ಲಿ ಸಚಿವರಾದ ಎಂ.ಬಿ‌. ಪಾಟೀಲ್, ಸತೀಶ್ ಜಾರಕಿಹೊಳಿ, ಭೈರತಿ ಸುರೇಶ್, ಹೆಚ್​.ಸಿ.ಮಹದೇವಪ್ಪ, ಎಂಎಲ್​ಸಿ ಯತೀಂದ್ರ ಸಿದ್ದರಾಮಯ್ಯ ಭಾಗಿಯಾಗಿದ್ದರು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ.

Published on: Nov 05, 2025 05:09 PM