ರಾಜ್ಯದ ಬೊಕ್ಕಸದಿಂದಲೇ ಸರ್ಕಾರದ ಯೋಜನೆಗಳಿಗೆ ಹಣ ವ್ಯಯಿಸಲಾಗುತ್ತದೆ, ಯಾರದೋ ಅಪ್ಪನ ಮನೆಯ ಹಣದಿಂದಲ್ಲ: ಹೆಚ್ ಸಿ ಬಾಲಕೃಷ್ಣ

ಅರುಣ್​ ಕುಮಾರ್​ ಬೆಳ್ಳಿ

Updated on: Feb 05, 2024 | 5:59 PM

ಹಿಂದೆ ಮುಖ್ಯಮಂತ್ರಿಗಳಾಗಿದ್ದ ಕುಮಾರಸ್ವಾಮಿಯವರಿಗೆ ಚೆನ್ನಾಗಿ ಗೊತ್ತಿದೆ. ಸರ್ಕಾರಿ ಯೋಜನೆಗಳಿಗೆ ನಮ್ಮಪ್ಪನ ಮನೆಯಿಂದಾಗಲೀ ಅವರಪ್ಪ ಮನೆಯಿಂದಾಗಲೀ ಹಣ ಹೊಂದಿಸುವುದಿಲ್ಲ. ಸರ್ಕಾರವನ್ನು ಯಾವುದೇ ಪಕ್ಷ ನಡೆಸುತ್ತಿರಲಿ, ಯೋಜನೆಗಳಿಗೆ ಸರ್ಕಾರದ ಬೊಕ್ಕಸದಿಂದಲೇ ಹಣ ಖರ್ಚುಮಾಡಲಾಗುತ್ತದೆ ಎಂದು ಬಾಲಕೃಷ್ಣ ಹೇಳಿದರು.

ರಾಮನಗರ: ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷ ಸೇರಿದವರಲ್ಲ ಆ ಪಕ್ಷದ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿಯವರ (HD Kumaraswamy) ಬಗ್ಗೆ ವಿಶೇಷ ಅಭಿರುಚಿಯಿಂದ ಮಾತಾಡುತ್ತಾರೆ. ಅವರನ್ನು ಟೀಕಿಸಿ ಮಾತಾಡುವುದೆಂದರೆ ಸಚಿವ ಎನ್ ಚಲುವರಾಯಸ್ವಾಮಿ (N Cheluvarayaswamy) ಮತ್ತು ಮಾಗಡಿಯ ಕಾಂಗ್ರೆಸ್ ಶಾಸಕ ಹೆಚ್ ಸಿ ಬಾಲಕೃಷ್ಣ (HC Balakrishna) ಅವರಿಗೆ ಎಲ್ಲಿಲ್ಲದ ಖುಷಿ. ಇಂದು ರಾಮನಗರದಲ್ಲಿ ಮಾಧ್ಯಮ ಪ್ರತಿನಿಧಿಗಳು ಬಾಲಕೃಷ್ಣ ಅವರಿಗೆ, ಗ್ಯಾರಂಟಿ ಯೋಜನೆಗಳಿಗೆ ಕಾಂಗ್ರೆಸ್ ನಾಯಕರು ತಮ್ಮ ಅಪ್ಪಂದಿರ ಮನೆಗಳಿಂದ ಹಣ ತರೋದಿಲ್ಲ, ಅಂತ ಕುಮಾರಸ್ವಾಮಿ ಹೇಳಿದ್ದಾರೆ ಅಂತ ತಿಳಿಸಿದಾಗ, ಈ ಮಾತನ್ನು ಕುಮಾರಸ್ವಾಮಿ ಹೇಳಿದ್ದಾರಾ? ಅಂತ ಬಾಲಕೃಷ್ಣ ಸೋಜಿಗ ವ್ಯಕ್ತಪಡಿಸಿದರು. ಮುಂದುವರಿದು ಮಾತಾಡಿದ ಅವರು ಹಿಂದೆ ಮುಖ್ಯಮಂತ್ರಿಗಳಾಗಿದ್ದ ಕುಮಾರಸ್ವಾಮಿಯವರಿಗೆ ಚೆನ್ನಾಗಿ ಗೊತ್ತಿದೆ. ಸರ್ಕಾರಿ ಯೋಜನೆಗಳಿಗೆ ನಮ್ಮಪ್ಪನ ಮನೆಯಿಂದಾಗಲೀ ಅವರಪ್ಪ ಮನೆಯಿಂದಾಗಲೀ ಹಣ ಹೊಂದಿಸುವುದಿಲ್ಲ. ಸರ್ಕಾರವನ್ನು ಯಾವುದೇ ಪಕ್ಷ ನಡೆಸುತ್ತಿರಲಿ, ಯೋಜನೆಗಳಿಗೆ ಸರ್ಕಾರದ ಬೊಕ್ಕಸದಿಂದಲೇ ಹಣ ಖರ್ಚುಮಾಡಲಾಗುತ್ತದೆ ಎಂದು ಬಾಲಕೃಷ್ಣ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.