‘ಉತ್ತರಾಧಿಕಾರಿ’ ಹೇಳಿಕೆ ವಿವಾದ: ಯತೀಂದ್ರಗೆ ಟಾಂಗ್​ ಕೊಟ್ಟ ಶಾಸಕ ರಂಗನಾಥ್​

Updated on: Oct 24, 2025 | 11:42 AM

ಸಿಎಂ ಸಿದ್ದರಾಮಯ್ಯ ಅವರ ಉತ್ತರಾಧಿಕಾರಿ ಸತೀಶ್​ ಜಾರಕಿಹೊಳಿ ಎಂಬ ಪರಿಷತ್​ ಸದಸ್ಯ ಡಾ. ಯತೀಂದ್ರ ಹೇಳಿಕೆಗೆ ಶಾಸಕ ಕುಣಿಗಲ್ ರಂಗನಾಥ್ ಟಾಂಗ್​ ಕೊಟ್ಟಿದ್ದಾರೆ. ಜನ ಆಶೀರ್ವಾದ ಮಾಡಿದ್ದು, ಅದಕ್ಕೆ ತಕ್ಕಂತೆ ಕೆಲಸ ಮಾಡಬೇಕು. ಅದು ಬಿಟ್ಟು ಗೊಂದಲ ಸೃಷ್ಟಿ ಮಾಡಬಾರದು ಎಂದಿದ್ದಾರೆ.

ಬೆಂಗಳೂರು, ಅಕ್ಟೋಬರ್​ 24: ಸಿಎಂ ಸಿದ್ದರಾಮಯ್ಯ (Siddaramaiah) ಅವರ ಉತ್ತರಾಧಿಕಾರಿ ಸತೀಶ್​ ಜಾರಕಿಹೊಳಿ ಎಂಬ ಪರಿಷತ್​ ಸದಸ್ಯ ಯತೀಂದ್ರ ಹೇಳಿಕೆ ಕಾಂಗ್ರೆಸ್​ ಪಾಳಯದಲ್ಲಿ ಸಂಚಲನ ಮೂಡಿಸಿದೆ. ಅದರಲ್ಲೂ ಡಿಸಿಎಂ ಡಿಕೆಶಿ ಬೆಂಬಲಿಗ ಶಾಸಕರು ಗರಂ ಆಗಿದ್ದಾರೆ. ಸಿಎಂ ಪುತ್ರನ ಹೇಳಿಕೆ ವಿರುದ್ಧ ನಿನ್ನೆಯಷ್ಟೇ ರಾಮನಗರ ಶಾಸಕ ಇಕ್ಬಾಲ್​ ಹುಸೇನ್​ ಕಿಡಿ ಕಾರಿದ್ದರು. ಶಾಸಕ ಕುಣಿಗಲ್ ರಂಗನಾಥ್ ಕೂಡ ಇದೇ ವಿಚಾರವಾಗಿ ಟಿವಿ9ಗೆ ಪ್ರತಿಕ್ರಿಯೆ ನೀಡಿದ್ದಾರೆ. ಯತೀಂದ್ರಗೆ ಯಾಕೆ ನೊಟೀಸ್​ ಕೊಟ್ಟಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಅದು ಪಕ್ಷದ ತೀರ್ಮಾನ. ಜನ ಆಶೀರ್ವಾದ ಮಾಡಿದ್ದು, ಅದಕ್ಕೆ ತಕ್ಕಂತೆ ಕೆಲಸ ಮಾಡಬೇಕು.  ಅದು ಬಿಟ್ಟು ಗೊಂದಲ ಸೃಷ್ಟಿ ಮಾಡಬಾರದು ಎಂದಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ.

Published on: Oct 24, 2025 11:31 AM
Follow Us
Prasanna Hegde

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More