AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಟೋರಾಜ ಆದ ಪ್ರದೀಪ್ ಈಶ್ವರ್, ಆಟೋ ಚಾಲಕರಿಗೆ ಧನಸಹಾಯ ಮಾಡಿ ಮಾನವೀಯತೆ ಮೆರೆದ ಶಾಸಕ

ಆಟೋರಾಜ ಆದ ಪ್ರದೀಪ್ ಈಶ್ವರ್, ಆಟೋ ಚಾಲಕರಿಗೆ ಧನಸಹಾಯ ಮಾಡಿ ಮಾನವೀಯತೆ ಮೆರೆದ ಶಾಸಕ

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on:Jul 30, 2023 | 3:07 PM

Share

ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಶಾಸಕ ಪ್ರದೀಶ್ ಈಶ್ವರ್​ ಅವರು ಕ್ಷೇತ್ರದ ಮಹಿಳೆಯರಿಗೆ ಸೀರೆಯನ್ನು ನೀಡುತ್ತಿದ್ದಾರೆ. ಇದರ ಮಧ್ಯೆ ಆಟೋ ಚಾಲಕರಿಗೂ ಧನಸಹಾಯ ಮಾಡಿ ಮಾನವೀಯತೆ ಮೆರೆದಿದ್ದಾರೆ.

ಚಿಕ್ಕಬಳ್ಳೂರ, (ಜುಲೈ 30): ಒಂದಲ್ಲ ಒಂದು ವಿಚಾರಕ್ಕೆ ಭಾರೀ ಸದ್ದು ಮಾಡುತ್ತಿರುವ ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಇದೀಗ ಆಟೋ ಚಾಲಕರಿಗೆ ಸಹಾಯಧನ ಮಾಡಿದ್ದಾರೆ. ಇಂದು (ಜುಲೈ 30) ಚಿಕ್ಕಬಳ್ಳಾಪುರ ನಗರದ ಸರ್ ಎಂ.ವಿಸ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಟೋ ಚಾಲಕರ ಕುಟುಂಬಕ್ಕೆ ತಲಾ 5 ಸಾವಿರ ರೂಪಾಯಿ ಧನಸಹಾಯ ಮಾಡಿ ಮಾನವೀಯತೆ ಮೆರೆದರು. ನಗರದಲ್ಲಿರುವ ಎಲ್ಲಾ ನೂರಾರು ಆಟೋ ಚಾಲಕರಿಗೆ 5 ಸಾವಿರ ರೂಪಾಯಿ ಧನಸಹಾಯ ಮಾಡಿದ್ದು, ಪ್ರತಿವರ್ಷ ಧನ ಸಹಾಯ ಮಾಡುವುದಾಗಿ ಘೋಷಣೆ ಮಾಡಿದರು. ಅಲ್ಲದೇ ಈ ಧನಸಹಾಯವನ್ನು ಮಕ್ಕಳ ವಿದ್ಯಾಬ್ಯಾಸಕ್ಕೆ ಬಳಸುವಂತೆ ಕರೆ ನೀಡಿದರು. ಇನ್ನು ಇದೇ ವೇಳೆ ಪ್ರದೀಶ್ ಈಶ್ವರ್ ಆಟೋ ಓಡಿಸಿ ಆಟೋರಾಜ ಆಗಿದ್ದಾರೆ.

Published on: Jul 30, 2023 03:05 PM
Follow Us
Bheemappa Patil
Bheemappa Patil

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More