AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget Session: ಈಶ್ವರಪ್ಪ ರಾಜ್ಯದ ಹಿರಿಯ ನಾಯಕ, ಅಗೌರವ ಸೂಚಿಸುವ ಪದಗಳನ್ನು ಪ್ರದೀಪ್ ಈಶ್ವರ್ ಬಳಸಬಾರದು

Karnataka Budget Session: ಬಿಜೆಪಿ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ವಿಷಯದಲ್ಲಿ ಮಾತಾಡುವಾಗ ಅವರು ಭಾಷೆಯ ಮೇಲೆ ಹಿಡಿತ ಸಾಧಿಸಲಾಗದೆ, ಬಾಯಿ ಮುಚ್ಚಿಕೊಂಡಿರಲಿ, ತೆಪ್ಪಗಿರಲಿ ಅಂತ ಹೇಳಿದ್ದು ಸರಿಯೆನಿಸಲಿಲ್ಲ. ಕನ್ನಡ ಭಾಷೆಯ ಪದಭಂಡಾರ ಅಗಾಧವಾದದ್ದು, ಟೀಕೆ ಮಾಡಲು ಸಹ್ಯವೆನಿಸಿಸುವ ಹಲವಾರು ಪದಗಳಿವೆ, ಅವುಗಳನ್ನು ಬಳಸಬಹುದಾಗಿತ್ತು.

ಅರುಣ್​ ಕುಮಾರ್​ ಬೆಳ್ಳಿ
|

Updated on: Feb 12, 2024 | 1:01 PM

Share

ಬೆಂಗಳೂರು: ಇಂದಿನಿಂದ ಆರಂಭವಾಗಿರುವ ಬಜೆಟ್ ಅಧಿವೇಶನದಲ್ಲಿ ಭಾಗವಹಿಸಲು ವಿಧಾನ ಸೌಧಕ್ಕೆ ಆಗಮಿಸಿದ ಚಿಕ್ಕಬಳ್ಳಾಪುರದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಮಾಧ್ಯಮಗಳೊಂದಿಗೆ ಮಾತಾಡುವಾಗ ತಮ್ಮ ನಾಯಕರನ್ನು ಹೊಗಳುವ ಭರದಲ್ಲಿ ಬಿಜೆಪಿ ನಾಯಕರನ್ನು ತೆಗಳಿದರು. ಬಿಜೆಪಿ ಹಿರಿಯ ನಾಯಕ ಕೆಎಸ್ ಈಶ್ವರಪ್ಪ (KS Eshwarappa) ವಿಷಯದಲ್ಲಿ ಮಾತಾಡುವಾಗ ಅವರು ಭಾಷೆಯ ಮೇಲೆ ಹಿಡಿತ ಸಾಧಿಸಲಾಗದೆ, ಬಾಯಿ ಮುಚ್ಚಿಕೊಂಡಿರಲಿ, ತೆಪ್ಪಗಿರಲಿ ಅಂತ ಹೇಳಿದ್ದು ಸರಿಯೆನಿಸಲಿಲ್ಲ. ಕನ್ನಡ ಭಾಷೆಯ ಪದಭಂಡಾರ ಅಗಾಧವಾದದ್ದು, ಟೀಕೆ ಮಾಡಲು ಸಹ್ಯವೆನಿಸಿಸುವ ಹಲವಾರು ಪದಗಳಿವೆ, ಅವುಗಳನ್ನು ಬಳಸಬಹುದಾಗಿತ್ತು. ಕಳೆದ 10 ವರ್ಷಗಳಲ್ಲಿ ಕಾಂಗ್ರೆಸ್ ನಾಯಕರನ್ನು ಹೆದರಿಸಲು ಆದಾಯ ತೆರಿಗೆ ಇಲಾಖೆ (Income Tax department) ಮತ್ತು ಜಾರಿ ನಿರ್ದೇಶನಾಲಯಗಳನ್ನು (Enforcement Directorate) ಬಳಸಿಕೊಳ್ಳಲಾಗುತ್ತಿದೆ ಎಂದ ಈಶ್ವರ್, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ವಿಶೇಷ ಗುಣಗಾನ ಮಾಡಿದರು.

ಶಿವಕುಮಾರ್ ಅವರನ್ನು ಮುಟ್ಟುವ ತಾಕತ್ತು ಯಾರಿಗೂ ಇಲ್ಲ, ಅವರು ಕೇವಲ ಕನಕಪುರದ ಬಂಡೆಯಲ್ಲ ಕರ್ನಾಟಕದ ಬಂಡೆ ಎಂದು ಈಶ್ವರ್ ಹೇಳಿದರು. ಶಿವಕುಮಾರ್ ಮತ್ತು ಸಿದ್ದರಾಮಯ್ಯ ತಾಕತ್ತು ಬಿಜೆಪಿಯವರಿಗೆ ಗೊತ್ತಿಲ್ಲ, ನಿನ್ನೆ ಗೃಹ ಸಚಿವ ಅಮಿತ್ ಶಾ ಅವರು ಮಾತಾಡುವಾಗ, ಸಿಎಂ ಮತ್ತು ಡಿಸಿಎಂ ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿ ಗೆಲ್ಲಬೇಕು ಅಂತ ಯಾಕೆ ಹೇಳಿದರು ಅನ್ನೋದನ್ನು ರಾಜ್ಯ ಬಿಜೆಪಿ ನಾಯಕರು ತಿಳಿದುಕೊಳ್ಳಲಿ ಎಂದು ಈಶ್ವರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್