AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget Session: ಈಶ್ವರಪ್ಪ ರಾಜ್ಯದ ಹಿರಿಯ ನಾಯಕ, ಅಗೌರವ ಸೂಚಿಸುವ ಪದಗಳನ್ನು ಪ್ರದೀಪ್ ಈಶ್ವರ್ ಬಳಸಬಾರದು

Karnataka Budget Session: ಬಿಜೆಪಿ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ವಿಷಯದಲ್ಲಿ ಮಾತಾಡುವಾಗ ಅವರು ಭಾಷೆಯ ಮೇಲೆ ಹಿಡಿತ ಸಾಧಿಸಲಾಗದೆ, ಬಾಯಿ ಮುಚ್ಚಿಕೊಂಡಿರಲಿ, ತೆಪ್ಪಗಿರಲಿ ಅಂತ ಹೇಳಿದ್ದು ಸರಿಯೆನಿಸಲಿಲ್ಲ. ಕನ್ನಡ ಭಾಷೆಯ ಪದಭಂಡಾರ ಅಗಾಧವಾದದ್ದು, ಟೀಕೆ ಮಾಡಲು ಸಹ್ಯವೆನಿಸಿಸುವ ಹಲವಾರು ಪದಗಳಿವೆ, ಅವುಗಳನ್ನು ಬಳಸಬಹುದಾಗಿತ್ತು.

ಅರುಣ್​ ಕುಮಾರ್​ ಬೆಳ್ಳಿ
|

Updated on: Feb 12, 2024 | 1:01 PM

Share

ಬೆಂಗಳೂರು: ಇಂದಿನಿಂದ ಆರಂಭವಾಗಿರುವ ಬಜೆಟ್ ಅಧಿವೇಶನದಲ್ಲಿ ಭಾಗವಹಿಸಲು ವಿಧಾನ ಸೌಧಕ್ಕೆ ಆಗಮಿಸಿದ ಚಿಕ್ಕಬಳ್ಳಾಪುರದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಮಾಧ್ಯಮಗಳೊಂದಿಗೆ ಮಾತಾಡುವಾಗ ತಮ್ಮ ನಾಯಕರನ್ನು ಹೊಗಳುವ ಭರದಲ್ಲಿ ಬಿಜೆಪಿ ನಾಯಕರನ್ನು ತೆಗಳಿದರು. ಬಿಜೆಪಿ ಹಿರಿಯ ನಾಯಕ ಕೆಎಸ್ ಈಶ್ವರಪ್ಪ (KS Eshwarappa) ವಿಷಯದಲ್ಲಿ ಮಾತಾಡುವಾಗ ಅವರು ಭಾಷೆಯ ಮೇಲೆ ಹಿಡಿತ ಸಾಧಿಸಲಾಗದೆ, ಬಾಯಿ ಮುಚ್ಚಿಕೊಂಡಿರಲಿ, ತೆಪ್ಪಗಿರಲಿ ಅಂತ ಹೇಳಿದ್ದು ಸರಿಯೆನಿಸಲಿಲ್ಲ. ಕನ್ನಡ ಭಾಷೆಯ ಪದಭಂಡಾರ ಅಗಾಧವಾದದ್ದು, ಟೀಕೆ ಮಾಡಲು ಸಹ್ಯವೆನಿಸಿಸುವ ಹಲವಾರು ಪದಗಳಿವೆ, ಅವುಗಳನ್ನು ಬಳಸಬಹುದಾಗಿತ್ತು. ಕಳೆದ 10 ವರ್ಷಗಳಲ್ಲಿ ಕಾಂಗ್ರೆಸ್ ನಾಯಕರನ್ನು ಹೆದರಿಸಲು ಆದಾಯ ತೆರಿಗೆ ಇಲಾಖೆ (Income Tax department) ಮತ್ತು ಜಾರಿ ನಿರ್ದೇಶನಾಲಯಗಳನ್ನು (Enforcement Directorate) ಬಳಸಿಕೊಳ್ಳಲಾಗುತ್ತಿದೆ ಎಂದ ಈಶ್ವರ್, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ವಿಶೇಷ ಗುಣಗಾನ ಮಾಡಿದರು.

ಶಿವಕುಮಾರ್ ಅವರನ್ನು ಮುಟ್ಟುವ ತಾಕತ್ತು ಯಾರಿಗೂ ಇಲ್ಲ, ಅವರು ಕೇವಲ ಕನಕಪುರದ ಬಂಡೆಯಲ್ಲ ಕರ್ನಾಟಕದ ಬಂಡೆ ಎಂದು ಈಶ್ವರ್ ಹೇಳಿದರು. ಶಿವಕುಮಾರ್ ಮತ್ತು ಸಿದ್ದರಾಮಯ್ಯ ತಾಕತ್ತು ಬಿಜೆಪಿಯವರಿಗೆ ಗೊತ್ತಿಲ್ಲ, ನಿನ್ನೆ ಗೃಹ ಸಚಿವ ಅಮಿತ್ ಶಾ ಅವರು ಮಾತಾಡುವಾಗ, ಸಿಎಂ ಮತ್ತು ಡಿಸಿಎಂ ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿ ಗೆಲ್ಲಬೇಕು ಅಂತ ಯಾಕೆ ಹೇಳಿದರು ಅನ್ನೋದನ್ನು ರಾಜ್ಯ ಬಿಜೆಪಿ ನಾಯಕರು ತಿಳಿದುಕೊಳ್ಳಲಿ ಎಂದು ಈಶ್ವರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬಿಮ್ಸ್ ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ, ಮಗು ಸಾವು ಆರೋಪ!
ಬಿಮ್ಸ್ ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ, ಮಗು ಸಾವು ಆರೋಪ!
ನಾರಿ ಶಕ್ತಿ ವಂದನ ಸಮ್ಮೇಳನ, ಪ್ರಧಾನಿ ಮೋದಿ ಭಾಷಣದ ನೇರ ಪ್ರಸಾರ
ನಾರಿ ಶಕ್ತಿ ವಂದನ ಸಮ್ಮೇಳನ, ಪ್ರಧಾನಿ ಮೋದಿ ಭಾಷಣದ ನೇರ ಪ್ರಸಾರ
ಬಿಯರ್ ಬಾಕ್ಸ್ ಲಾರಿ ಪಲ್ಟಿ, ಅಡಿಕೆ ತೋಟದಲ್ಲಿ ಬಿಯರ್ ಬಾಟಲಿಗಳ ಸುರಿಮಳೆ!
ಬಿಯರ್ ಬಾಕ್ಸ್ ಲಾರಿ ಪಲ್ಟಿ, ಅಡಿಕೆ ತೋಟದಲ್ಲಿ ಬಿಯರ್ ಬಾಟಲಿಗಳ ಸುರಿಮಳೆ!
ಸಹೋದರರ ನಡುವೆ ಬಿರುಕು? ಹಾರ್ದಿಕ್ ಔಟಾದಾಗ ಕೃನಾಲ್ ಅತಿರೇಕದ ಸಂಭ್ರಮ
ಸಹೋದರರ ನಡುವೆ ಬಿರುಕು? ಹಾರ್ದಿಕ್ ಔಟಾದಾಗ ಕೃನಾಲ್ ಅತಿರೇಕದ ಸಂಭ್ರಮ
ಚಹಾಲ್ ಮೆಸೇಜ್ ಸ್ಕ್ರೀನ್ ಶಾಟ್ ಹಂಚಿಕೊಂಡ ಉಲ್ಲು ನಟಿ ತಾನಿಯಾ
ಚಹಾಲ್ ಮೆಸೇಜ್ ಸ್ಕ್ರೀನ್ ಶಾಟ್ ಹಂಚಿಕೊಂಡ ಉಲ್ಲು ನಟಿ ತಾನಿಯಾ
ಡಿಕೆಡಿ ಟ್ರೋಫಿ ಎತ್ತಿದ್ದ ಸಿದ್ದೇಗೌಡ-ದೀಶಲ್; ಸಿಕ್ಕ ಹಣ ಎಷ್ಟು?
ಡಿಕೆಡಿ ಟ್ರೋಫಿ ಎತ್ತಿದ್ದ ಸಿದ್ದೇಗೌಡ-ದೀಶಲ್; ಸಿಕ್ಕ ಹಣ ಎಷ್ಟು?