AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget Session: ಈಶ್ವರಪ್ಪ ರಾಜ್ಯದ ಹಿರಿಯ ನಾಯಕ, ಅಗೌರವ ಸೂಚಿಸುವ ಪದಗಳನ್ನು ಪ್ರದೀಪ್ ಈಶ್ವರ್ ಬಳಸಬಾರದು

Karnataka Budget Session: ಬಿಜೆಪಿ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ವಿಷಯದಲ್ಲಿ ಮಾತಾಡುವಾಗ ಅವರು ಭಾಷೆಯ ಮೇಲೆ ಹಿಡಿತ ಸಾಧಿಸಲಾಗದೆ, ಬಾಯಿ ಮುಚ್ಚಿಕೊಂಡಿರಲಿ, ತೆಪ್ಪಗಿರಲಿ ಅಂತ ಹೇಳಿದ್ದು ಸರಿಯೆನಿಸಲಿಲ್ಲ. ಕನ್ನಡ ಭಾಷೆಯ ಪದಭಂಡಾರ ಅಗಾಧವಾದದ್ದು, ಟೀಕೆ ಮಾಡಲು ಸಹ್ಯವೆನಿಸಿಸುವ ಹಲವಾರು ಪದಗಳಿವೆ, ಅವುಗಳನ್ನು ಬಳಸಬಹುದಾಗಿತ್ತು.

Follow us
ಅರುಣ್​ ಕುಮಾರ್​ ಬೆಳ್ಳಿ
|

Updated on: Feb 12, 2024 | 1:01 PM

ಬೆಂಗಳೂರು: ಇಂದಿನಿಂದ ಆರಂಭವಾಗಿರುವ ಬಜೆಟ್ ಅಧಿವೇಶನದಲ್ಲಿ ಭಾಗವಹಿಸಲು ವಿಧಾನ ಸೌಧಕ್ಕೆ ಆಗಮಿಸಿದ ಚಿಕ್ಕಬಳ್ಳಾಪುರದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಮಾಧ್ಯಮಗಳೊಂದಿಗೆ ಮಾತಾಡುವಾಗ ತಮ್ಮ ನಾಯಕರನ್ನು ಹೊಗಳುವ ಭರದಲ್ಲಿ ಬಿಜೆಪಿ ನಾಯಕರನ್ನು ತೆಗಳಿದರು. ಬಿಜೆಪಿ ಹಿರಿಯ ನಾಯಕ ಕೆಎಸ್ ಈಶ್ವರಪ್ಪ (KS Eshwarappa) ವಿಷಯದಲ್ಲಿ ಮಾತಾಡುವಾಗ ಅವರು ಭಾಷೆಯ ಮೇಲೆ ಹಿಡಿತ ಸಾಧಿಸಲಾಗದೆ, ಬಾಯಿ ಮುಚ್ಚಿಕೊಂಡಿರಲಿ, ತೆಪ್ಪಗಿರಲಿ ಅಂತ ಹೇಳಿದ್ದು ಸರಿಯೆನಿಸಲಿಲ್ಲ. ಕನ್ನಡ ಭಾಷೆಯ ಪದಭಂಡಾರ ಅಗಾಧವಾದದ್ದು, ಟೀಕೆ ಮಾಡಲು ಸಹ್ಯವೆನಿಸಿಸುವ ಹಲವಾರು ಪದಗಳಿವೆ, ಅವುಗಳನ್ನು ಬಳಸಬಹುದಾಗಿತ್ತು. ಕಳೆದ 10 ವರ್ಷಗಳಲ್ಲಿ ಕಾಂಗ್ರೆಸ್ ನಾಯಕರನ್ನು ಹೆದರಿಸಲು ಆದಾಯ ತೆರಿಗೆ ಇಲಾಖೆ (Income Tax department) ಮತ್ತು ಜಾರಿ ನಿರ್ದೇಶನಾಲಯಗಳನ್ನು (Enforcement Directorate) ಬಳಸಿಕೊಳ್ಳಲಾಗುತ್ತಿದೆ ಎಂದ ಈಶ್ವರ್, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ವಿಶೇಷ ಗುಣಗಾನ ಮಾಡಿದರು.

ಶಿವಕುಮಾರ್ ಅವರನ್ನು ಮುಟ್ಟುವ ತಾಕತ್ತು ಯಾರಿಗೂ ಇಲ್ಲ, ಅವರು ಕೇವಲ ಕನಕಪುರದ ಬಂಡೆಯಲ್ಲ ಕರ್ನಾಟಕದ ಬಂಡೆ ಎಂದು ಈಶ್ವರ್ ಹೇಳಿದರು. ಶಿವಕುಮಾರ್ ಮತ್ತು ಸಿದ್ದರಾಮಯ್ಯ ತಾಕತ್ತು ಬಿಜೆಪಿಯವರಿಗೆ ಗೊತ್ತಿಲ್ಲ, ನಿನ್ನೆ ಗೃಹ ಸಚಿವ ಅಮಿತ್ ಶಾ ಅವರು ಮಾತಾಡುವಾಗ, ಸಿಎಂ ಮತ್ತು ಡಿಸಿಎಂ ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿ ಗೆಲ್ಲಬೇಕು ಅಂತ ಯಾಕೆ ಹೇಳಿದರು ಅನ್ನೋದನ್ನು ರಾಜ್ಯ ಬಿಜೆಪಿ ನಾಯಕರು ತಿಳಿದುಕೊಳ್ಳಲಿ ಎಂದು ಈಶ್ವರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ
ಕುಮಾರಸ್ವಾಮಿ, ಬಿಜೆಪಿ ನಾಯಕರಿಂದ ಹೆಣಗಳ ಮೇಲೆ ರಾಜಕಾರಣ: ಶಿವಕುಮಾರ್
ಕುಮಾರಸ್ವಾಮಿ, ಬಿಜೆಪಿ ನಾಯಕರಿಂದ ಹೆಣಗಳ ಮೇಲೆ ರಾಜಕಾರಣ: ಶಿವಕುಮಾರ್
ಪೋಸ್ಟ್​ಮಾರ್ಟಂ ಬೇಡ, ದೇಹ ಕೊಡಿ ಎಂದು ಅತ್ತ ತಾಯಿ ನೆನೆದು ಡಿಕೆಶಿ ಕಣ್ಣೀರು
ಪೋಸ್ಟ್​ಮಾರ್ಟಂ ಬೇಡ, ದೇಹ ಕೊಡಿ ಎಂದು ಅತ್ತ ತಾಯಿ ನೆನೆದು ಡಿಕೆಶಿ ಕಣ್ಣೀರು