AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget Session: ಈಶ್ವರಪ್ಪ ರಾಜ್ಯದ ಹಿರಿಯ ನಾಯಕ, ಅಗೌರವ ಸೂಚಿಸುವ ಪದಗಳನ್ನು ಪ್ರದೀಪ್ ಈಶ್ವರ್ ಬಳಸಬಾರದು

Karnataka Budget Session: ಬಿಜೆಪಿ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ವಿಷಯದಲ್ಲಿ ಮಾತಾಡುವಾಗ ಅವರು ಭಾಷೆಯ ಮೇಲೆ ಹಿಡಿತ ಸಾಧಿಸಲಾಗದೆ, ಬಾಯಿ ಮುಚ್ಚಿಕೊಂಡಿರಲಿ, ತೆಪ್ಪಗಿರಲಿ ಅಂತ ಹೇಳಿದ್ದು ಸರಿಯೆನಿಸಲಿಲ್ಲ. ಕನ್ನಡ ಭಾಷೆಯ ಪದಭಂಡಾರ ಅಗಾಧವಾದದ್ದು, ಟೀಕೆ ಮಾಡಲು ಸಹ್ಯವೆನಿಸಿಸುವ ಹಲವಾರು ಪದಗಳಿವೆ, ಅವುಗಳನ್ನು ಬಳಸಬಹುದಾಗಿತ್ತು.

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Feb 12, 2024 | 1:01 PM

Share

ಬೆಂಗಳೂರು: ಇಂದಿನಿಂದ ಆರಂಭವಾಗಿರುವ ಬಜೆಟ್ ಅಧಿವೇಶನದಲ್ಲಿ ಭಾಗವಹಿಸಲು ವಿಧಾನ ಸೌಧಕ್ಕೆ ಆಗಮಿಸಿದ ಚಿಕ್ಕಬಳ್ಳಾಪುರದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಮಾಧ್ಯಮಗಳೊಂದಿಗೆ ಮಾತಾಡುವಾಗ ತಮ್ಮ ನಾಯಕರನ್ನು ಹೊಗಳುವ ಭರದಲ್ಲಿ ಬಿಜೆಪಿ ನಾಯಕರನ್ನು ತೆಗಳಿದರು. ಬಿಜೆಪಿ ಹಿರಿಯ ನಾಯಕ ಕೆಎಸ್ ಈಶ್ವರಪ್ಪ (KS Eshwarappa) ವಿಷಯದಲ್ಲಿ ಮಾತಾಡುವಾಗ ಅವರು ಭಾಷೆಯ ಮೇಲೆ ಹಿಡಿತ ಸಾಧಿಸಲಾಗದೆ, ಬಾಯಿ ಮುಚ್ಚಿಕೊಂಡಿರಲಿ, ತೆಪ್ಪಗಿರಲಿ ಅಂತ ಹೇಳಿದ್ದು ಸರಿಯೆನಿಸಲಿಲ್ಲ. ಕನ್ನಡ ಭಾಷೆಯ ಪದಭಂಡಾರ ಅಗಾಧವಾದದ್ದು, ಟೀಕೆ ಮಾಡಲು ಸಹ್ಯವೆನಿಸಿಸುವ ಹಲವಾರು ಪದಗಳಿವೆ, ಅವುಗಳನ್ನು ಬಳಸಬಹುದಾಗಿತ್ತು. ಕಳೆದ 10 ವರ್ಷಗಳಲ್ಲಿ ಕಾಂಗ್ರೆಸ್ ನಾಯಕರನ್ನು ಹೆದರಿಸಲು ಆದಾಯ ತೆರಿಗೆ ಇಲಾಖೆ (Income Tax department) ಮತ್ತು ಜಾರಿ ನಿರ್ದೇಶನಾಲಯಗಳನ್ನು (Enforcement Directorate) ಬಳಸಿಕೊಳ್ಳಲಾಗುತ್ತಿದೆ ಎಂದ ಈಶ್ವರ್, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ವಿಶೇಷ ಗುಣಗಾನ ಮಾಡಿದರು.

ಶಿವಕುಮಾರ್ ಅವರನ್ನು ಮುಟ್ಟುವ ತಾಕತ್ತು ಯಾರಿಗೂ ಇಲ್ಲ, ಅವರು ಕೇವಲ ಕನಕಪುರದ ಬಂಡೆಯಲ್ಲ ಕರ್ನಾಟಕದ ಬಂಡೆ ಎಂದು ಈಶ್ವರ್ ಹೇಳಿದರು. ಶಿವಕುಮಾರ್ ಮತ್ತು ಸಿದ್ದರಾಮಯ್ಯ ತಾಕತ್ತು ಬಿಜೆಪಿಯವರಿಗೆ ಗೊತ್ತಿಲ್ಲ, ನಿನ್ನೆ ಗೃಹ ಸಚಿವ ಅಮಿತ್ ಶಾ ಅವರು ಮಾತಾಡುವಾಗ, ಸಿಎಂ ಮತ್ತು ಡಿಸಿಎಂ ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿ ಗೆಲ್ಲಬೇಕು ಅಂತ ಯಾಕೆ ಹೇಳಿದರು ಅನ್ನೋದನ್ನು ರಾಜ್ಯ ಬಿಜೆಪಿ ನಾಯಕರು ತಿಳಿದುಕೊಳ್ಳಲಿ ಎಂದು ಈಶ್ವರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ