ವಿದೇಶ ಪ್ರವಾಸ ಮುಗಿಸಿ ಬೆಂಗಳೂರಿಗೆ ವಾಪಸ್​​ ಆದ ಕಾಂಗ್ರೆಸ್​ ಶಾಸಕರು

Edited By:

Updated on: Mar 04, 2026 | 9:09 AM

ವಿದೇಶ ಪ್ರವಾಸಕ್ಕೆ ತೆರಳಿದ್ದ ಕಾಂಗ್ರೆಸ್​ ಶಾಸಕರು ತಡರಾತ್ರಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಐಎಬಿ ಬಂದಿಳಿದಿದ್ದಾರೆ. ಈ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ದೇವೇಂದ್ರಪ್ಪ ಅಧ್ಯಯನ ಮಾಡಲು ಹೋಗಿದ್ದಾಗಿ ಹೇಳಿದ್ದಾರೆ. ಆದರೆ ಅದೆಲ್ಲಾ ಸುಳ್ಳು ಎಂದು ಸಿರುಗುಪ್ಪ ಶಾಸಕ ಬಿಎಂ‌ ನಾಗರಾಜ್ ಹೇಳಿದ್ದಾರೆ.

ಬೆಂಗಳೂರು, ಮಾರ್ಚ್​ 04: ರಾಜ್ಯ ಕಾಂಗ್ರೆಸ್​ನಲ್ಲಿ ಕುರ್ಚಿಕಾದಾಟದ ನಡುವೆ ವಿದೇಶಕ್ಕೆ ಹಾರಿದ್ದ ಶಾಸಕರು ವಿದೇಶ ಪ್ರವಾಸ ಮುಗಿಸಿ ಇಂದು ಬೆಂಗಳೂರಿಗೆ ವಾಪಸ್​ ಆಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿಯಿರುವ ಕೆಂಪೇಗೌಡ ಏರ್​​​ಪೋರ್ಟ್​ಗೆ ಹೆಚ್​.ಡಿ.ತಮ್ಮಯ್ಯ, ದೇವೇಂದ್ರಪ್ಪ, ಪುಟ್ಟರಂಗಶೆಟ್ಟಿ ಸೇರಿದಂತೆ ಹಲವು ಕಾಂಗ್ರೆಸ್​ ಶಾಸಕರು ಮಧ್ಯರಾತ್ರಿ ಆಗಮಿಸಿದ್ದಾರೆ. ಬಹುತೇಕ ಶಾಸಕರು ಮಾಧ್ಯಮಗಳ ಕ್ಯಾಮರಾ ಕಾಣುತ್ತಿದ್ದಂತೆ ತರಾತುರಿಯಲ್ಲಿ ಕಾರು ಹತ್ತಿ ತೆಳಿದ್ದಾರೆ. ಅಧ್ಯಯನ ಮಾಡಲು ಹೋಗಿದ್ದಾಗಿ ಶಾಸಕ ದೇವೇಂದ್ರಪ್ಪ ಹೇಳಿದರೆ, ಅದೆಲ್ಲಾ ಸುಳ್ಳು ಎಂದು ಸಿರುಗುಪ್ಪ ಶಾಸಕ ಬಿಎಂ‌ ನಾಗರಾಜ್ ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More