ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪನವರನ್ನು ಸದನದಲ್ಲಿ ಮನಸಾರೆ ಕೊಂಡಾಡಿದ ಕಾಂಗ್ರೆಸ್ ಶಾಸಕಿ ರೂಪಕಲಾ ಶಶಿಧರ್

ಅರುಣ್​ ಕುಮಾರ್​ ಬೆಳ್ಳಿ

Updated on: Feb 22, 2023 | 4:55 PM

ಸದನದಲ್ಲಿ ಯಡಿಯೂರಪ್ಪನವರು ಇದ್ದಾಗಲಷ್ಟೇ ಅದಕ್ಕೊಂದು ಕಳೆ ಬರುತ್ತದೆ, ಕಷ್ಟಗಳನ್ನು ಹೇಳಿಕೊಂಡಾಗ ನಿಸ್ವಾರ್ಥ ಮನೋಭಾವದಿಂದ ಸಹಾಯ ಮಾಡಿದ್ದಾರೆ ಎಂದು ರೂಪಕಲಾ ಹೇಳಿದರು.

ಬೆಂಗಳೂರು: ವಿಧಾನಮಂಡಲದ ಬಜೆಟ್ ಅಧಿವೇಶನ ಮುಕ್ತಾಯದ ಹಂತಕ್ಕೆ ಬರುತ್ತಿದೆ. ಹಾಗಾಗಿ ಸದನದ ಕಲಾಪಗಳು ನೀರಸ ಅನಿಸುತ್ತಿವೆ. ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಭೀಕರ ಅನಿಸುವಂಥ ವಾಗ್ವಾದಗಳು ಕ್ರಮೇಣ ಕಡಿಮೆಯಾಗುತ್ತಿವೆ. ಸದನದಲ್ಲಿ ಇಂದು ಮಾತಾಡಿದ ಕೆಜಿಎಫ್ ನ ಕಾಂಗ್ರೆಸ್ ಶಾಸಕಿ ರೂಪಕಲಾ ಶಶಿಧರ್ (Roopkala Shashidhar) ಮಾಜಿ ಮುಖ್ಯಮಂತ್ರಿ ಮತ್ತು ರಾಜ್ಯದ ಹಿರಿಯ ಮುತ್ಸದ್ದಿ ಬಿಎಸ್ ಯಡಿಯೂರಪ್ಪ (BS Yediyurappa) ಅವರನ್ನು ಮನಸಾರೆ ಹೊಗಳಿದರು. ಸದನದಲ್ಲಿ ಅವರು ಇದ್ದಾಗಲಷ್ಟೇ ಅದಕ್ಕೊಂದು ಕಳೆ ಬರುತ್ತದೆ, ಕಷ್ಟಗಳನ್ನು ಹೇಳಿಕೊಂಡಾಗ ನಿಸ್ವಾರ್ಥ ಮನೋಭಾವದಿಂದ ಸಹಾಯ ಮಾಡಿದ್ದಾರೆ ಎಂದು ರೂಪಕಲಾ ಹೇಳಿದರು. ಹಾಗೆಯೇ, ಕೋಲಾರ ಜಿಲ್ಲೆಗೆ ಕೆಸಿ ವ್ಯಾಲಿ ನೀರು ಹರಿಯುವಂತೆ ಮಾಡಿದ ಸಿದ್ದರಾಮಯ್ಯನವರನ್ನು (Siddaramaiah) ಕೂಡ ಶ್ಲಾಘಿಸಿದ ಶಾಸಕಿ, ವಿರೋಧ ಪಕ್ಷದ ನಾಯಕ ಕೋಲಾರ ಜಿಲ್ಲೆಯಿಂದ ಸ್ಪರ್ಧಿಸುವ ನಿರ್ಧಾರ ಪ್ರಕಟಿಸಿರುವುದು ಜಿಲ್ಲೆ ಜನತೆಯ ಸೌಭಾಗ್ಯ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ  ಕ್ಲಿಕ್ಕಿಸಿ

 

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.