TD Rajegowda MLA: ದತ್ತಪೀಠ ಹೋರಾಟ, ಅಯೋಧ್ಯೆ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕನಿಂದ ಕ್ಷಮೆಯಾಚನೆ

ಅರುಣ್​ ಕುಮಾರ್​ ಬೆಳ್ಳಿ Edited By:

Updated on: Jan 25, 2023 | 11:31 AM

ಶಿರಡಿ ಸಾಯಿಬಾಬಾರ ದರ್ಶನ ಪಡೆಯಲು ಕುಂಟುಂಬಸಮೇತ ಹೋಗಿರುವ ಶಾಸಕರು ಅಲ್ಲಿಂದಲೇ ಒಂದು ವಿಡಿಯೋವನ್ನು ಬಿಡುಗಡೆ ಮಾಡಿ ತಮ್ಮ ಹೇಳಿಕೆಗಳಿಗೆ ಕ್ಷಮೆ ಯಾಚಿಸಿದ್ದಾರೆ.

ಸೂಕ್ಷ್ಮ ಸಂಗತಿಗಳ ಬಗ್ಗೆ ಹಗುರವಾಗಿ ಮಾತಾಡುವುದು ನಂತರ ಅದಕ್ಕೆ ವ್ಯಾಪಕ ಪ್ರತಿರೋಧ ವ್ಯಕ್ತವಾದಾಗ ಬಹಿರಂಗವಾಗು ಕ್ಷಮೆಯಾಚಿಸುವುದು ನಮ್ಮ ರಾಜಕಾರಣಿಗಳಿಗೆ ಹೊಸದೇನೂ ಅಲ್ಲ ಮಾರಾಯ್ರೇ. ಶೃಂಗೇರಿ ಶಾಸಕ ಟಿಡಿ ರಾಜೇಗೌಡ (TD Rajegowda) ಅವರು ಅಯೋಧ್ಯೆ (Ayodhya) ಮತ್ತು ದತ್ತಪೀಠ (Dattapeetha) ಹೋರಾಟದ ಬಗ್ಗೆ ಆಡಿದ ಮಾತುಗಳು ವಿವಾದವನ್ನು ಸೃಷ್ಟಿಸಿದ್ದು ನಿಮಗೆ ಗೊತ್ತಿದೆ. ಅವರ ಹೇಳಿಕೆ ವಿರುದ್ಧ ಅಕ್ರೋಷ ವ್ಯಕ್ತಪಡಿಸಿದ್ದ ಹಿಂದೂ ಸಂಘಟನೆಗಳು ಶಾಸಕರು ಕ್ಷಮೆ ಕೇಳಬೇಕೆಂದು ಆಗ್ರಹಿಸಿದ್ದವು. ಶಿರಡಿ ಸಾಯಿಬಾಬಾರ ದರ್ಶನ ಪಡೆಯಲು ಕುಂಟುಂಬಸಮೇತ ಹೋಗಿರುವ ಶಾಸಕರು ಅಲ್ಲಿಂದಲೇ ಒಂದು ವಿಡಿಯೋವನ್ನು ಬಿಡುಗಡೆ ಮಾಡಿ ತಮ್ಮ ಹೇಳಿಕೆಗಳಿಗೆ ಕ್ಷಮೆ ಯಾಚಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Published on: Jan 25, 2023 11:27 AM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.