ಆಸ್ಪತ್ರೆಯಲ್ಲಿ ಬೆಡ್​ ಸಿಗದೆ ಶಾಸಕ ಜಮೀರ್ ಆಪ್ತನ ಸಾವು

[lazy-load-videos-and-sticky-control id=”SFVSE06HHWk”] ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಆಸ್ಪತ್ರೆಯಲ್ಲಿ ಬೆಡ್​ ಸಿಗದೆ ಸಾಯುವವರ ಸಂಖ್ಯೆ ದಿನೇ ದಿನೇ ಏರುತ್ತಲೆ ಇದೆ. ನಗರದ ರಾಯಪುರ ವಾರ್ಡ್​ನ ಕಾಂಗ್ರೆಸ್ ಮುಖಂಡರಾದ ನಜೀರ್ ಅಹಮದ್ ಅವರು ಸಾವನ್ನಪ್ಪಿದ್ದಾರೆ. ನಜೀರ್ ಅಹಮದ್, ಶಾಸಕ ಜಮೀರ್ ಅಹಮದ್ ಅವರ ಆಪ್ತರಾಗಿದ್ದು ತೀವ್ರ ಉಸಿರಾಟ ಸಮಸ್ಯೆಯಿಂದ ಬೃಂದಾವನ ಆಸ್ಪತ್ರೆಗೆ ತೆರಳಿದ್ದಾರೆ. ಬೃಂದಾವನ ಆಸ್ಪತ್ರೆಯಲ್ಲಿ ಸ್ವಾಬ್ ಪರೀಕ್ಷೆ ಮಾತ್ರ ತೆಗೆದುಕೊಂಡ ಆಸ್ಪತ್ರೆಯ ಸಿಬ್ಬಂದಿ, ನಜೀರ್ ಅಹಮದ್ ಅವರನ್ನು ವಾಪಸ್ ಕಳಿಸಿದ್ದಾರೆ. ಅಲ್ಲಿಂದ ಲೀಲಾವತಿ ಆಸ್ಪತ್ರೆಗೆ ಹೋದ […]

ಆಸ್ಪತ್ರೆಯಲ್ಲಿ ಬೆಡ್​ ಸಿಗದೆ ಶಾಸಕ ಜಮೀರ್ ಆಪ್ತನ  ಸಾವು
ಸಾಧು ಶ್ರೀನಾಥ್​ Edited By:

Updated on: Jul 10, 2020 | 6:26 PM

[lazy-load-videos-and-sticky-control id=”SFVSE06HHWk”]

ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಆಸ್ಪತ್ರೆಯಲ್ಲಿ ಬೆಡ್​ ಸಿಗದೆ ಸಾಯುವವರ ಸಂಖ್ಯೆ ದಿನೇ ದಿನೇ ಏರುತ್ತಲೆ ಇದೆ. ನಗರದ ರಾಯಪುರ ವಾರ್ಡ್​ನ ಕಾಂಗ್ರೆಸ್ ಮುಖಂಡರಾದ ನಜೀರ್ ಅಹಮದ್ ಅವರು ಸಾವನ್ನಪ್ಪಿದ್ದಾರೆ. ನಜೀರ್ ಅಹಮದ್, ಶಾಸಕ ಜಮೀರ್ ಅಹಮದ್ ಅವರ ಆಪ್ತರಾಗಿದ್ದು ತೀವ್ರ ಉಸಿರಾಟ ಸಮಸ್ಯೆಯಿಂದ ಬೃಂದಾವನ ಆಸ್ಪತ್ರೆಗೆ ತೆರಳಿದ್ದಾರೆ. ಬೃಂದಾವನ ಆಸ್ಪತ್ರೆಯಲ್ಲಿ ಸ್ವಾಬ್ ಪರೀಕ್ಷೆ ಮಾತ್ರ ತೆಗೆದುಕೊಂಡ ಆಸ್ಪತ್ರೆಯ ಸಿಬ್ಬಂದಿ, ನಜೀರ್ ಅಹಮದ್ ಅವರನ್ನು ವಾಪಸ್ ಕಳಿಸಿದ್ದಾರೆ.

ಅಲ್ಲಿಂದ ಲೀಲಾವತಿ ಆಸ್ಪತ್ರೆಗೆ ಹೋದ ನಜೀರ್ ಅಹಮದ್​, ICU ಸಿಗುವಷ್ಟರಲ್ಲೇ ಕೊನೆಯುಸಿರೆಳೆದಿದ್ದಾರೆ. ನಿನ್ನೆ ನಜೀರ್ ಅವರ ಸ್ವಾಬ್ ರಿಪೋರ್ಟ್ ಪಾಸಿಟಿವ್ ಬಂದಿದ್ದು, ಉಸಿರಾಟದ ಸಮಸ್ಯೆ ಬಿಟ್ಟು ಬೇರೆ ಯಾವುದೇ ಸಮಸ್ಯೆ ಇರಲಿಲ್ಲ. ಬೃಂದಾವನ ಆಸ್ಪತ್ರೆಯಲ್ಲೇ ಕೂಡಲೇ ಚಿಕಿತ್ಸೆಗೆ ಒಳಪಡಿಸಿದ್ದರೆ ಬದುಕುವ ಸಾಧ್ಯತೆ ಹೆಚ್ಚಿತ್ತೆಂದು ಕುಟುಂಬದವರು ಆರೋಪ ಮಾಡಿದ್ದಾರೆ.

Published On - 4:03 pm, Fri, 10 July 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us