ನಿಲ್ಲದ ಸತೀಶ್ ಸೈಲ್ ಮತ್ತು ಆರ್ ವಿ ದೇಶಪಾಂಡೆ ನಡುವಿನ ಜಟಾಪಟಿ, ಅಸಮಾಧಾನ ಹೊರಹಾಕಲು ಕೆಡಿಪಿ ಸಭೆಯೇ ವೇದಿಕೆ

ಅರುಣ್​ ಕುಮಾರ್​ ಬೆಳ್ಳಿ

Updated on: Jan 28, 2025 | 7:03 PM

ಶಾಸಕರು ಮತ್ತು ಮಂತ್ರಿಗಳು ತಮ್ಮ ಬೇಸರ, ಕೋಪ ಮತ್ತು ಅಸಮಾಧಾನ ಹೊರಹಾಕಲು ಕೆಡಿಪಿ ಇಲ್ಲವೇ ದಿಶಾ ಸಭೆಗಳನ್ನು ಬಳಸುವುದು ವಿಷಾದನೀಯ. ಅವರ ಕೋಪ ತಾಪಗಳಿಗೆ ಅಧಿಕಾರಿಗಳು ಬಲಿಪಶುವಾಗುತ್ತಿರುವುದು ಮತ್ತಷ್ಟು ಶೋಚನೀಯ. ಹಾಗೆ ನೋಡಿದರೆ ತಮ್ಮ ಅಸಮಾಧಾನಗಳನ್ನು ಹೇಳಿಕೊಳ್ಳಲು ಜನಪ್ರತಿನಿಧಿಗಳಿಗೆ ಪಕ್ಷದ ವೇದಿಕೆ ಮತ್ತು ಮಾಧ್ಯಮಗಳಿವೆ.

ಕಾರವಾರ: ಬೇಲೆಕೇರಿ ಬಂದರಿನಿಂದ ಅಕ್ರಮವಾಗಿ ಕಬ್ಬಿಣದ ಅದಿರು ರಫ್ತು ಮಾಡಿದ ವಿವಿಧ ಪ್ರಕರಣಗಳಲ್ಲಿ ಆರೋಪಿಯಾಗಿ ಜೈಲು ಸೇರಿ ಹೈಕೋರ್ಟ್ ಶಿಕ್ಷೆಯನ್ನು ಅಮಾನತ್ತುಗೊಳಿಸಿದ ಬಳಿಕ ಹೊರಬಂದಿರುವ ಕಾರವಾರದ ಶಾಸಕ ಕಾಂಗ್ರೆಸ್​ನ  ಸತೀಶ್ ಸೈಲ್ ಇಂದು ಕೆಡಿಪಿ ಸಭೆಯಲ್ಲಿ ಪಕ್ಷದ ಹಿರಿಯ ನಾಯಕ ಮತ್ತು ಹಳಿಯಾಳದ ಶಾಸಕ ಅರ್ ವಿ ದೇಶಪಾಂಡೆ ವಿರುದ್ಧ ತಮ್ಮ ಅಸಮಾಧಾನ ಹೊರಹಾಕಿದರು. ದೃಶ್ಯಗಳಲ್ಲಿ ಅವರು ಅಧಿಕಾರಿಗಳ ಮೇಲೆ ರೇಗುತ್ತಿರುವುದನ್ನು ನೋಡಬಹುದು. ನಮ್ಮ ಕಾರವಾರ ಪ್ರತಿನಿಧಿ ನೀಡುವ ಮಾಹಿತಿ ಪ್ರಕಾರ ಸತೀಶ್ ಸೈಲ್ ಮತ್ತು ದೇಶಪಾಂಡೆ ನಡುವೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಅಧಿಕಾರಿಗಳ ವರ್ಗಾವಣೆಗೆ ಸಂಬಂಧಿಸಿದಂತೆ ಕೋಲ್ಡ್ ವಾರ್ ನಡೆಯುತ್ತಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಬೇಲೆಕೇರಿ ಕೇಸ್: ಶಾಸಕ ಸತೀಶ್ ಸೈಲ್ ಸೇರಿ ಇತರೆ ಅಪರಾಧಿಗಳಿಗೆ ಹೈಕೋರ್ಟ್ ರಿಲೀಫ್

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.