ಪ್ರಜ್ವಲ್ ಆಗಮನದ ಸಂದರ್ಭ ವಿಮಾನ ನಿಲ್ದಾಣದಲ್ಲಿ ಡಿಕೆ ಸುರೇಶ್ ಪ್ರತ್ಯಕ್ಷ! ಹೇಳಿದ್ದೇನು?

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಾಗ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಸಹ ಅಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದರು. ಪ್ರಜ್ವಲ್​ರನ್ನು ಎಸ್​ಐಟಿ ವಶಕ್ಕೆ ಪಡೆದ ಸ್ಥಳದಲ್ಲೇ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಡಿಕೆ ಸುರೇಶ್ ಹಲವು ವಿಚಾರ ಪ್ರಸ್ತಾಪಿಸಿದರು. ಆ ಕುರಿತು ವಿಡಿಯೋ ಇಲ್ಲಿದೆ.

ಪ್ರಜ್ವಲ್ ಆಗಮನದ ಸಂದರ್ಭ ವಿಮಾನ ನಿಲ್ದಾಣದಲ್ಲಿ ಡಿಕೆ ಸುರೇಶ್ ಪ್ರತ್ಯಕ್ಷ! ಹೇಳಿದ್ದೇನು?
|

Updated on: May 31, 2024 | 9:15 AM

ಬೆಂಗಳೂರು, ಮೇ 31: ಅಶ್ಲೀಲ ವಿಡಿಯೋ, ಅತ್ಯಾಚಾರ ಪ್ರಕರಣದಲ್ಲಿ ಎಸ್​​ಐಟಿ ವಶವಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಜರ್ಮನಿಯ ಮ್ಯೂನಿಚ್​​ನಿಂದ ಬೆಂಗಳೂರಿನ ಕೆಂಪೇಗೌಡ ವಿಮಾನ (Bengaluru Airport) ನಿಲ್ದಾಣಕ್ಕೆ ಬಂದ ಅದೇ ಸಮಯದಲ್ಲಿ ರಾತ್ರಿ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಸಹ ಅಲ್ಲಿ ಕಂಡುಬಂದು ಅಚ್ಚರಿ ಮೂಡಿಸಿದರು. ಇದೇ ವೇಳೆ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೂ ಅವರು ಉತ್ತರಿಸಿದರು.

ಅಶ್ಲೀಲ ವಿಡಿಯೋ ಕೇಸ್​ನಲ್ಲಿ ಎಸ್​ಐಟಿಯಿಂದ ಪ್ರಜ್ವಲ್ ಬಂಧನ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಸಾಕಷ್ಟು ಆರೋಪಗಳು ಅವರ ಮೇಲಿದೆ. ಅದನ್ನು ಎದುರಿಸುವುದಕ್ಕಾಗಿ ಎಸ್​​ಐಟಿ ಮುಂದೆ ಹಾಜರಾಗುತ್ತಾರೆ. ಇದರಲ್ಲಿ ಷಡ್ಯಂತ್ರದ ವಿಚಾರ ಇಲ್ಲ. ಇದು ಸ್ವಯಂಕೃತ ಅಪರಾಧ ಅಷ್ಟೆ. ಪೆನ್​ಡ್ರೈವ್​ ಪ್ರಕರಣದ​ ಬಗ್ಗೆ ಎಸ್​ಐಟಿ ತನಿಖೆ ನಡೆಸುತ್ತಿದೆ. ಕಾನೂನು ಪ್ರಕಾರ ಏನು ತನಿಖೆ ಅಗಬೇಕಿದೆಯೋ ಅದರಂತೆ ಆಗಲಿದೆ ಎಂದರು.

ಇದನ್ನೂ ಓದಿ: ಮ್ಯೂನಿಕ್​ನಿಂದ ಬೆಂಗಳೂರು ವರೆಗೆ ಪ್ರಜ್ವಲ್: ಈ ಅವಧಿಯಲ್ಲಿ ಏನೇನಾಯ್ತು? ಇಲ್ಲಿದೆ ಸಂಪೂರ್ಣ ವಿವರ

ಪ್ರಕರಣ ಬೆಳಕಿಗೆ ಬಂದಾಗ ವಿದೇಶಕ್ಕೆ ತೆರಳಿ ತಲೆಮರೆಸಿಕೊಂಡಿದ್ದ ಅವರು 33 ದಿನಗಳು ಕಳೆದ ಮೇಲೆ ವಾಪಸ್ ಬಂದಿದ್ದಾರೆ. ಸಾಕ್ಷ್ಯ ನಾಶದ ಸಾಧ್ಯತೆ ಏನಾದರೂ ಇದೆಯೇ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸುರೇಶ್, ಆ ಬಗ್ಗೆ ನನಗೆ ಗೊತ್ತಿಲ್ಲ. ಎಸ್​ಐಟಿ ತನಿಖೆ ನಡೆಯಲಿ. ತನಿಖೆಯ ನಂತರ ಸತ್ಯಾಂಶ ಹೊರಬರಲಿದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow us
Video: 60 ದಶಕದ ಹಾಡನ್ನು ರೀ ಕ್ರಿಯೇಟ್ ಮಾಡಿದ ಮುಕೇಶ್ ಹಾಗೂ ನೀತಾ ದಂಪತಿ
Video: 60 ದಶಕದ ಹಾಡನ್ನು ರೀ ಕ್ರಿಯೇಟ್ ಮಾಡಿದ ಮುಕೇಶ್ ಹಾಗೂ ನೀತಾ ದಂಪತಿ
ಮುಂಡರಗಿಯ ಸಿಂಗಟಾಲೂರ್ ಬ್ಯಾರೇಜ್ ಭರ್ತಿ, 45,000 ಕ್ಯೂಸೆಕ್ಸ್ ನೀರು ನದಿಗೆ
ಮುಂಡರಗಿಯ ಸಿಂಗಟಾಲೂರ್ ಬ್ಯಾರೇಜ್ ಭರ್ತಿ, 45,000 ಕ್ಯೂಸೆಕ್ಸ್ ನೀರು ನದಿಗೆ
ಉಡುಪಿಯಲ್ಲಿ ನಿಲ್ಲದ ಮಳೆ ಪ್ರತಾಪ, ನಗರದಲ್ಲಿ ಬೆಳಗ್ಗೆಯಿಂದ ಕುಂಭದ್ರೋಣ
ಉಡುಪಿಯಲ್ಲಿ ನಿಲ್ಲದ ಮಳೆ ಪ್ರತಾಪ, ನಗರದಲ್ಲಿ ಬೆಳಗ್ಗೆಯಿಂದ ಕುಂಭದ್ರೋಣ
ಮಂಗಳೂರಿನಲ್ಲಿ ಸಚಿವ ದಿನೇಶ್ ಗುಂಡೂರಾವ್ ಸ್ವಿಮ್ಮಿಂಗ್; ಇಲ್ಲಿದೆ ವಿಡಿಯೋ
ಮಂಗಳೂರಿನಲ್ಲಿ ಸಚಿವ ದಿನೇಶ್ ಗುಂಡೂರಾವ್ ಸ್ವಿಮ್ಮಿಂಗ್; ಇಲ್ಲಿದೆ ವಿಡಿಯೋ
ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಚೆಂಡಿಯಾದಲ್ಲಿ ಮನೆಗಳು ಜಲಾವೃತ
ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಚೆಂಡಿಯಾದಲ್ಲಿ ಮನೆಗಳು ಜಲಾವೃತ
ಟೀಮ್ ಇಂಡಿಯಾ ವಿಜಯಯಾತ್ರೆ ವೇಳೆ ಪಾಕಿಸ್ತಾನ್ ಘೋಷಣೆ ಕೂಗಿದ ಫ್ಯಾನ್ಸ್..!
ಟೀಮ್ ಇಂಡಿಯಾ ವಿಜಯಯಾತ್ರೆ ವೇಳೆ ಪಾಕಿಸ್ತಾನ್ ಘೋಷಣೆ ಕೂಗಿದ ಫ್ಯಾನ್ಸ್..!
ಕೊಡಗು: ತಡ ರಾತ್ರಿ ನಡು ರಸ್ತೆಯಲ್ಲಿ ಲಾರಿ ತಡೆದು ತರಕಾರಿ ಭಕ್ಷಿಸಿದ ಗಜರಾಜ
ಕೊಡಗು: ತಡ ರಾತ್ರಿ ನಡು ರಸ್ತೆಯಲ್ಲಿ ಲಾರಿ ತಡೆದು ತರಕಾರಿ ಭಕ್ಷಿಸಿದ ಗಜರಾಜ
Mohammed Siraj: ಮೊಹಮ್ಮದ್ ಸಿರಾಜ್​ಗೆ ಅದ್ಧೂರಿ ಸ್ವಾಗತ
Mohammed Siraj: ಮೊಹಮ್ಮದ್ ಸಿರಾಜ್​ಗೆ ಅದ್ಧೂರಿ ಸ್ವಾಗತ
ದರ್ಶನ್​ಗೆ ಲಕ್ಷ ಲಕ್ಷ ಹಣ ಕೊಟ್ಟಿದ್ದಕ್ಕೆ ಕಾರಣ ನೀಡಿದ ಮಾಜಿ ಮೇಯರ್
ದರ್ಶನ್​ಗೆ ಲಕ್ಷ ಲಕ್ಷ ಹಣ ಕೊಟ್ಟಿದ್ದಕ್ಕೆ ಕಾರಣ ನೀಡಿದ ಮಾಜಿ ಮೇಯರ್
ಕ್ಲಿಕ್ ಮಾಡುತ್ತಿದ್ದಂತೆ ಇನ್​ಸ್ಟಂಟ್ ಫೋಟೊ ಪ್ರಿಂಟ್
ಕ್ಲಿಕ್ ಮಾಡುತ್ತಿದ್ದಂತೆ ಇನ್​ಸ್ಟಂಟ್ ಫೋಟೊ ಪ್ರಿಂಟ್