ಪ್ರಜ್ವಲ್ ಆಗಮನದ ಸಂದರ್ಭ ವಿಮಾನ ನಿಲ್ದಾಣದಲ್ಲಿ ಡಿಕೆ ಸುರೇಶ್ ಪ್ರತ್ಯಕ್ಷ! ಹೇಳಿದ್ದೇನು?

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಾಗ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಸಹ ಅಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದರು. ಪ್ರಜ್ವಲ್​ರನ್ನು ಎಸ್​ಐಟಿ ವಶಕ್ಕೆ ಪಡೆದ ಸ್ಥಳದಲ್ಲೇ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಡಿಕೆ ಸುರೇಶ್ ಹಲವು ವಿಚಾರ ಪ್ರಸ್ತಾಪಿಸಿದರು. ಆ ಕುರಿತು ವಿಡಿಯೋ ಇಲ್ಲಿದೆ.

ಪ್ರಜ್ವಲ್ ಆಗಮನದ ಸಂದರ್ಭ ವಿಮಾನ ನಿಲ್ದಾಣದಲ್ಲಿ ಡಿಕೆ ಸುರೇಶ್ ಪ್ರತ್ಯಕ್ಷ! ಹೇಳಿದ್ದೇನು?
|

Updated on: May 31, 2024 | 9:15 AM

ಬೆಂಗಳೂರು, ಮೇ 31: ಅಶ್ಲೀಲ ವಿಡಿಯೋ, ಅತ್ಯಾಚಾರ ಪ್ರಕರಣದಲ್ಲಿ ಎಸ್​​ಐಟಿ ವಶವಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಜರ್ಮನಿಯ ಮ್ಯೂನಿಚ್​​ನಿಂದ ಬೆಂಗಳೂರಿನ ಕೆಂಪೇಗೌಡ ವಿಮಾನ (Bengaluru Airport) ನಿಲ್ದಾಣಕ್ಕೆ ಬಂದ ಅದೇ ಸಮಯದಲ್ಲಿ ರಾತ್ರಿ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಸಹ ಅಲ್ಲಿ ಕಂಡುಬಂದು ಅಚ್ಚರಿ ಮೂಡಿಸಿದರು. ಇದೇ ವೇಳೆ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೂ ಅವರು ಉತ್ತರಿಸಿದರು.

ಅಶ್ಲೀಲ ವಿಡಿಯೋ ಕೇಸ್​ನಲ್ಲಿ ಎಸ್​ಐಟಿಯಿಂದ ಪ್ರಜ್ವಲ್ ಬಂಧನ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಸಾಕಷ್ಟು ಆರೋಪಗಳು ಅವರ ಮೇಲಿದೆ. ಅದನ್ನು ಎದುರಿಸುವುದಕ್ಕಾಗಿ ಎಸ್​​ಐಟಿ ಮುಂದೆ ಹಾಜರಾಗುತ್ತಾರೆ. ಇದರಲ್ಲಿ ಷಡ್ಯಂತ್ರದ ವಿಚಾರ ಇಲ್ಲ. ಇದು ಸ್ವಯಂಕೃತ ಅಪರಾಧ ಅಷ್ಟೆ. ಪೆನ್​ಡ್ರೈವ್​ ಪ್ರಕರಣದ​ ಬಗ್ಗೆ ಎಸ್​ಐಟಿ ತನಿಖೆ ನಡೆಸುತ್ತಿದೆ. ಕಾನೂನು ಪ್ರಕಾರ ಏನು ತನಿಖೆ ಅಗಬೇಕಿದೆಯೋ ಅದರಂತೆ ಆಗಲಿದೆ ಎಂದರು.

ಇದನ್ನೂ ಓದಿ: ಮ್ಯೂನಿಕ್​ನಿಂದ ಬೆಂಗಳೂರು ವರೆಗೆ ಪ್ರಜ್ವಲ್: ಈ ಅವಧಿಯಲ್ಲಿ ಏನೇನಾಯ್ತು? ಇಲ್ಲಿದೆ ಸಂಪೂರ್ಣ ವಿವರ

ಪ್ರಕರಣ ಬೆಳಕಿಗೆ ಬಂದಾಗ ವಿದೇಶಕ್ಕೆ ತೆರಳಿ ತಲೆಮರೆಸಿಕೊಂಡಿದ್ದ ಅವರು 33 ದಿನಗಳು ಕಳೆದ ಮೇಲೆ ವಾಪಸ್ ಬಂದಿದ್ದಾರೆ. ಸಾಕ್ಷ್ಯ ನಾಶದ ಸಾಧ್ಯತೆ ಏನಾದರೂ ಇದೆಯೇ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸುರೇಶ್, ಆ ಬಗ್ಗೆ ನನಗೆ ಗೊತ್ತಿಲ್ಲ. ಎಸ್​ಐಟಿ ತನಿಖೆ ನಡೆಯಲಿ. ತನಿಖೆಯ ನಂತರ ಸತ್ಯಾಂಶ ಹೊರಬರಲಿದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow us
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್