AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ತಿಕ ದೀಪೋತ್ಸವಕ್ಕೆ ಅನುಮತಿ ಕೊಟ್ಟ ನ್ಯಾಯಮೂರ್ತಿ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ

ಕಾರ್ತಿಕ ದೀಪೋತ್ಸವಕ್ಕೆ ಅನುಮತಿ ಕೊಟ್ಟ ನ್ಯಾಯಮೂರ್ತಿ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ

Ganapathi Sharma
|

Updated on: Dec 13, 2025 | 2:39 PM

Share

ತಮಿಳುನಾಡಿನ ತಿರುಪರಾನುಕುಂದ್ರಂ ಬೆಟ್ಟದ ಮೇಲೆ ಕಾರ್ತಿಕ ದೀಪ ಬೆಳಗಿಸಲು ಅನುಮತಿ ನೀಡಿದ ಜಡ್ಜ್ ವಿರುದ್ಧ ಪದಚ್ಯುತಿಗೆ ಸಹಿ ಹಾಕಿದ ಕಾಂಗ್ರೆಸ್ ಸಂಸದರ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಸಹಿಷ್ಣುತೆ ಬಗ್ಗೆ ಮಾತನಾಡುವ ಕಾಂಗ್ರೆಸ್ ನಾಯಕರಿಗೆ ಜಡ್ಜ್, ನ್ಯಾಯಾಂಗದ ಮೇಲೆಯೇ ನಂಬಿಕೆ ಇಲ್ಲ ಎಂದು ಕಿಡಿಕಾರಿದರು.

ಹುಬ್ಬಳ್ಳಿ, ಡಿಸೆಂಬರ್ 13: ತಮಿಳುನಾಡಿನಲ್ಲಿ ದರ್ಗಾ ಸಮೀಪದ ದೇಗುಲದಲ್ಲಿ ಕಾರ್ತಿಕ ದೀಪೋತ್ಸವಕ್ಕೆ ಅನುಮತಿ ನೀಡಿದ ಹೈಕೋರ್ಟ್ ನ್ಯಾಯಮೂರ್ತಿ ವಿರುದ್ಧ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ತಮ್ಮ ಪರವಾಗಿ ತೀರ್ಪು ಬರದಿದ್ದಾಗ ನ್ಯಾಯಾಂಗವನ್ನು ಟೀಕಿಸುವ ಮತ್ತು ನ್ಯಾಯಮೂರ್ತಿಗಳ ವಾಗ್ದಂಡನೆಗೆ ಪ್ರಯತ್ನಿಸುವ ಕಾಂಗ್ರೆಸ್‌ನ ವರ್ತನೆಯನ್ನು ಅವರು ಖಂಡಿಸಿದ್ದಾರೆ.

ತಮಿಳುನಾಡಿನ ತಿರುಪರಾನುಕುಂದ್ರಂ ಬೆಟ್ಟದ ಮೇಲಿನ ದರ್ಗಾದ ಸಮೀಪದಲ್ಲಿರುವ ಸ್ಥಳದಲ್ಲಿ ಕಾರ್ತಿಕ ದೀಪ ಹಚ್ಚಲು ಅನುಮತಿ ಕೊಟ್ಟು ತೀರ್ಪು ಪ್ರಕಟಿಸಿದ್ದಕ್ಕೆ ಮದ್ರಾಸ್ ಹೈಕೋರ್ಟ್ ನ್ಯಾಯಮೂರ್ತಿಗಳ ವಿರುದ್ಧ 103 ಸಂಸದರು ವಾಗ್ದಂಡನೆಗೆ ಸಹಿ ಸಂಗ್ರಹಿಸಿದ್ದಾರೆ. ಇದರಲ್ಲಿ ಕರ್ನಾಟಕದ ಮೂವರು (ಶ್ರೇಯಸ್ ಪಟೇಲ್, ಕುಮಾರ್ ನಾಯಕ್ ಮತ್ತು ಡಾ. ಪ್ರಭಾ ಮಲ್ಲಿಕಾರ್ಜುನ್) ಸಹ ಸೇರಿದ್ದಾರೆ. ಇದು ನ್ಯಾಯಮೂರ್ತಿಗಳು ತಮಗೆ ಬೇಕಾದಂತೆ ತೀರ್ಪು ನೀಡಬೇಕು ಎಂಬ ಒತ್ತಡದ ತಂತ್ರವಾಗಿದೆ ಎಂದು ಜೋಶಿ ಉಲ್ಲೇಖಿಸಿದ್ದಾರೆ. ಪ್ರಜಾಪ್ರಭುತ್ವ ಉಳಿಯಬೇಕಾದರೆ ವಿರೋಧ ಪಕ್ಷಗಳ ಈ ‘ಹಿಂದೂ ವಿರೋಧಿ’ ಮತ್ತು ‘ಸಂವಿಧಾನ ವಿರೋಧಿ’ ಮಾನಸಿಕತೆಯನ್ನು ಜನ ಗಂಭೀರವಾಗಿ ಪರಿಗಣಿಸಬೇಕು ಎಂದು ಸಚಿವ ಜೋಶಿ ಕರೆ ನೀಡಿದ್ದಾರೆ.

ಪ್ರಕರಣದ ವಿವರಗಳಿಗೆ ಓದಿ: ದರ್ಗಾ ಸಮೀಪ ಕಾರ್ತಿಕ ದೀಪ ಹಚ್ಚಲು ಅನುಮತಿ: ಜಡ್ಜ್ ಪದಚ್ಯುತಿಗೆ ಸಹಿ ಹಾಕಿದ ಕರ್ನಾಟಕದ ಕೈ ಸಂಸದರು

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ