BJP-JDS​ ಪಾದಯಾತ್ರೆಗೆ ಟಕ್ಕರ್​, ಮೈಸೂರಿನಲ್ಲಿ ಕಾಂಗ್ರೆಸ್​ ಜನಾಂದೋಲನ ಸಮಾವೇಶ

|

Updated on: Aug 09, 2024 | 11:29 AM

ಬಿಜೆಪಿ-ಜೆಡಿಎಸ್​ ಪಾದಯಾತ್ರೆಗೆ ಟಕ್ಕರ್ ಕೊಡಲು ಇಂದು (ಶುಕ್ರವಾರ) ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್​ ಬೃಹತ್​ ಜನಾಂದೋಲನ ಸಮಾವೇಶ ನಡೆಸುತ್ತಿದೆ. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸಚಿವರು ಶಾಸಕರು ಭಾಗಿಯಾಗಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಿನಾಮೆ ಆಗ್ರಹಿಸಿ ಬಿಜೆಪಿ ಮತ್ತು ಜೆಡಿಎಸ್​ ನಾಯಕರು ಜಂಟಿಯಾಗಿ ಮೈಸೂರು ಚಲೋ ಪಾದಯಾತ್ರೆ ನಡೆಸುತ್ತಿದ್ದಾರೆ. ಇದಕ್ಕೆ ಕೌಂಟರ್​​ ಕೊಡಲು ಕಾಂಗ್ರೆಸ್​ ಪದಾಯಾತ್ರೆ ನಡೆಯುವ ಊರುಗಳಲ್ಲಿ ಜನಾಂದಲೋನ ಸಮಾವೇಶ ನಡೆಸುತ್ತ ಬಂದಿದೆ. ಮೈತ್ರಿ ನಾಯಕರ ಪಾದಯಾತ್ರೆ ಶನಿವಾರ ಮೈಸೂರು ತಲುಪಲಿದೆ. ಇದಕ್ಕೂ ಮುನ್ನ ಇಂದು (ಶುಕ್ರವಾರ) ಕಾಂಗ್ರೆಸ್​ ಬೃಹತ್​ ಜನಾಂದೋಲನ ಸಮಾವೇಶ ನಡೆಸುತ್ತಿದೆ. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮ ನಡೆಯುತ್ತಿದೆ. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಸಚಿವರು ಶಾಸಕರು ಭಾಗಿಯಾಗಿದ್ದಾರೆ. ಸಮಾವೇಶದಲ್ಲಿ ಸುಮಾರು 1 ಲಕ್ಷ ಜನರು ಭಾಗಿಯಾಗುವ ಸಾಧ್ಯತೆ​ ಇದೆ. ಕಾರ್ಯಕ್ರಮದ ವೀಕ್ಷಣೆಗೆ ಬೃಹತ್ ಎಲ್​​ಇಡಿ ಪರದೆಗಳ ವ್ಯವಸ್ಥೆ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:25 am, Fri, 9 August 24

Follow us on