ಪ್ರಧಾನಿ ಮೋದಿ, ಅಮಿತ್ ಶಾ ಮತ್ತು ಜೆಪಿ ನಡ್ಡಾರ ಸರಿಸಮಕ್ಕೆ ನಿಲ್ಲುವ ನಾಯಕ ಕಾಂಗ್ರೆಸ್ ನಲ್ಲಿ ಒಬ್ಬನಾದರೂ ಇದ್ದಾನೆಯೇ? ಬಿಎಸ್ ಯಡಿಯೂರಪ್ಪ
ಕಾಂಗ್ರೆಸ್ನಲ್ಲಿ ಅಲ್ಲೊಬ್ಬ ಇಲ್ಲೊಬ್ಬ ಯಂಕ ನಾಣಿ ಸೀನರಂಥ ನಾಯಕರೇ ಇರೋದು ಎಂದು ಯಡಿಯೂರಪ್ಪ ಹೇಳಿದರು.
ವಿಜಯಪುರ: ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು (BS Yediyurappa) ಕಾಂಗ್ರೆಸ್ ಪಕ್ಷ ಘೋಷಿಸಿರುವ ಗೃಹಲಕ್ಷ್ಮಿ ಯೋಜನೆಯನ್ನು ಲೇವಡಿ ಮಾಡಿದರು. ಪಕ್ಷದ ಆಧ್ಯಕ್ಷ ಜೆಪಿ ನಡ್ಡಾ (JP Nadda) ಅವರೊಂದಿಗೆ ಇಂದು ನಗರದಲ್ಲಿ ಸದಸ್ಯತ್ವ ನೋಂದಣಿ ಅಭಿಯಾನದ ಬಳಿಕ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತಾಡಿದ ಯಡಿಯೂರಪ್ಪನವರು ಮಹಿಳಾ ಸಬಲೀಕರಣ ಸಾಧ್ಯವಾಗುವುದಾದರೆ ಅದು ಕೇವಲ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರದಿಂದ ಮಾತ್ರ. ನಡ್ಡಾ, ಪ್ರಧಾನಿ ನರೇಂದ್ರ ಮೋದಿ (PM Narendra Modi) ಮತ್ತು ಅಮಿತ್ ಶಾ ಅವರ ಸರಿಸಮಕ್ಕೆ ನಿಲ್ಲುವ ನಾಯಕ ಕಾಂಗ್ರೆಸ್ ನಲ್ಲಿ ಒಬ್ಬನಾದರೂ ಇದ್ದಾನೆಯೇ, ಅಲ್ಲೊಬ್ಬ ಇಲ್ಲೊಬ್ಬ ಯಂಕ ನಾಣಿ ಸೀನರಂಥ ನಾಯಕರೇ ಆ ಪಕ್ಷದಲ್ಲಿರೋದು ಎಂದು ಯಡಿಯೂರಪ್ಪ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
