ಕಾಂಗ್ರೆಸ್ ಪಕ್ಷ ಒಂದು ಸಮುದ್ರದಂತೆ ಬರುವವರಿಗೆಲ್ಲ ಸ್ವಾಗತ: ಎಸ್ ಎಸ್ ಮಲ್ಲಿಕಾರ್ಜುನ, ಸಚಿವ

ಅರುಣ್​ ಕುಮಾರ್​ ಬೆಳ್ಳಿ

Updated on: Sep 05, 2023 | 5:18 PM

ಅಸಲಿಗೆ ರೇಣುಕಾಚಾರ್ಯ ಕಾಂಗ್ರೆಸ್ ಸೇರ್ತೀನಿ ಅಂತ ಎಲ್ಲೂ ಹೇಳಿಲ್ಲ, ಮನೆಗೆ ಬಂದು ಚಹಾ ಸೇವಿಸಿ ಹೋದವರಿಗೆಲ್ಲ ಪಕ್ಷ ಸೇರುತ್ತಾರೆಂದರೆ ಹೇಗೆ ಅಂತ ಅವರು ಕೇಳಿದರು. ಮುಂದುವರಿದು ಮಾತಾಡಿದ ಮಲ್ಲಿಕಾರ್ಜುನ, ಕಾಂಗ್ರೆಸ್ ಪಕ್ಷಕ್ಕೆ ಲೋಕ ಸಭೆ ಚುನಾವಣೆ ಗೆಲ್ಲಲೇಬೇಕಿದೆ. ಹಾಗಾಗಿ ಬಿಜೆಪಿಯಿಂದ ಬರೋರಿಗೆಲ್ಲ ಸ್ವಾಗತ ಎಂದು ಹೇಳಿದರು.

ದಾವಣಗೆರೆ: ನಗರದಲ್ಲಿಂದು ಮಾಧ್ಯಮ ಪ್ರತಿನಿಧುಗಳೊಂದಿಗೆ ಮಾತಾಡಿದ ಭೂ ಮತ್ತು ಗಣಿ ಇಲಾಖೆ ಸಚಿವ ಎಸ್ ಎಸ್ ಮಲ್ಲಿಕಾರ್ಜುನ (SS Mallikarjun) ಬಿಜೆಪಿಯ ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ (MP Renukacharya) ಬಗ್ಗೆ ಮೃದು ದೋರಣೆ ಪ್ರದರ್ಶಿಸಿದರು. ರೇಣುಕಾಚಾರ್ಯರನ್ನು ಕಾಂಗ್ರೆಸ್ ಪಕ್ಷಕ್ಕೆ (Congress Party) ಸೇರಿಸಿಕೊಳ್ಳುವುದು ಬೇಡ ಅಂತ ಅವರು ಮೊದಲು ವರಿಷ್ಠರಿಗೆ ಹೇಳಿದ್ದರಂತೆ. ಅವರನ್ನು ಸ್ವಾಗತಿಸುತ್ತೀರಾ ಅಂತ ಇವತ್ತು ಕೇಳಿದ ಪ್ರಶ್ನೆಗೆ ಮಲ್ಲಿಕಾರ್ಜುನ ಬರೋರಿಗೆ ಯಾರು ಬೇಡ ಅನ್ನುತ್ತಾರೆ, ಕಾಂಗ್ರೆಸ್ ಪಕ್ಷ ಒಂದು ಸಮುದ್ರವಿದ್ದಂತೆ, ಹಲವಾರು ಜನ ಬರುತ್ತಾರೆ, ಹಲವಾರು ಜನ ಹೋಗುತ್ತಾರೆ, ಯಾರನ್ನೂ ತಡೆಯಲಾಗಲ್ಲ ಎಂದು ಹೇಳಿದರು. ಅಸಲಿಗೆ ರೇಣುಕಾಚಾರ್ಯ ಕಾಂಗ್ರೆಸ್ ಸೇರ್ತೀನಿ ಅಂತ ಎಲ್ಲೂ ಹೇಳಿಲ್ಲ, ಮನೆಗೆ ಬಂದು ಚಹಾ ಸೇವಿಸಿ ಹೋದವರಿಗೆಲ್ಲ ಪಕ್ಷ ಸೇರುತ್ತಾರೆಂದರೆ ಹೇಗೆ ಅಂತ ಅವರು ಕೇಳಿದರು. ಮುಂದುವರಿದು ಮಾತಾಡಿದ ಮಲ್ಲಿಕಾರ್ಜುನ, ಕಾಂಗ್ರೆಸ್ ಪಕ್ಷಕ್ಕೆ ಲೋಕ ಸಭೆ ಚುನಾವಣೆ ಗೆಲ್ಲಲೇಬೇಕಿದೆ. ಹಾಗಾಗಿ ಬಿಜೆಪಿಯಿಂದ ಬರೋರಿಗೆಲ್ಲ ಸ್ವಾಗತ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.