Lungi Factor: ಕಾಂಗ್ರೆಸ್ ಮೊದಲು ಇಟಲಿ ರಾಜಮಾತೆ ಸೆರಗಿನಿಂದ ಹೊರ ಬರಲಿ: ಹುಬ್ಬಳ್ಳಿಯಲ್ಲಿ ಬಿಜೆಪಿ ಶಾಸಕ

ಸಾಧು ಶ್ರೀನಾಥ್​

Updated on: Jul 01, 2023 | 6:03 PM

ಕಾಂಗ್ರೆಸ್ ಮೊದಲು ಇಟಲಿ ರಾಜಮಾತೆ ಸೆರಗಿನಿಂದ ಹೊರ ಬರಲಿ. ಮೊದಲು ಕಾಂಗ್ರೆಸ್ಸಿಗರು ತಮ್ಮ ಪಂಚೆ ಗಟ್ಟಿಯಾಗಿ ಇಟ್ಟುಕೊಳ್ಳಿ ಎಂದು ಹುಬ್ಬಳ್ಳಿಯಲ್ಲಿ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಹೇಳಿದ್ದಾರೆ.

ಕಾಂಗ್ರೆಸ್ (Congress) ಮೊದಲು ಇಟಲಿ ರಾಜಮಾತೆ (Italy royal mother) ಸೆರಗಿನಿಂದ ಹೊರ ಬರಲಿ ಎಂದು ಹುಬ್ಬಳ್ಳಿಯಲ್ಲಿ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ (Mahesh Tenginkai) ಹೇಳಿದ್ದಾರೆ. ಮೊದಲು ಕಾಂಗ್ರೆಸ್ಸಿಗರು ತಮ್ಮ ಪಂಚೆ ಗಟ್ಟಿಯಾಗಿ ಇಟ್ಟುಕೊಳ್ಳಿ. ಈ ಹಿಂದೆ ಕೆಲವು ಸಲ ನಿಮ್ಮ ಪಂಚೆ ಕಳಚಿತ್ತು ಎಂದು ಟೆಂಗಿನಕಾಯಿ ಹೇಳಿದರು. ಪಂಚೆ ಸರಿ ಮಾಡ್ಕೊಳ್ಳಿ ಎಂದು ಹೇಳಿದ್ದನ್ನು ನಾವು ನೋಡಿದ್ದೇವೆ. ಕಾಂಗ್ರೆಸ್​ನವರು ಗ್ಯಾರಂಟಿ ಜಾರಿ ಮಾಡದೆ ಮಾತನಾಡುತ್ತಿದ್ದಾರೆ. ಕಾಂಗ್ರೆಸ್ ಏನೇ ಮಾಡಿದ್ರೂ ಕೌಂಟರ್ ಅಟ್ಯಾಕ್ ಮಾಡುತ್ತೇವೆ ಎಂದು ಹುಬ್ಬಳ್ಳಿಯಲ್ಲಿ ಬಿಜೆಪಿ ಶಾಸಕ (BJP MLA from Hubballi) ಮಹೇಶ್ ಟೆಂಗಿನಕಾಯಿ ಹೇಳಿದ್ದಾರೆ.

Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು