Congress to Protest; ರಾಹುಲ್ ಗಾಂಧಿ ವಿರುದ್ಧ ನಡೆಯುತ್ತಿರುವ ರಾಜಕೀಯ ಷಡ್ಯಂತ್ರ ವಿರೋಧಿಸಿ ಜುಲೈ 12 ರಂದು ಪ್ರತಿಭಟನೆ: ಡಿಕೆ ಶಿವಕುಮಾರ್

ಅರುಣ್​ ಕುಮಾರ್​ ಬೆಳ್ಳಿ

Updated on: Jul 10, 2023 | 7:06 PM

ದೇಶದ ಎಲ್ಲ ವಿರೋಧ ಪಕ್ಷಗಳು ಈಗ ರಾಹುಲ್ ಗಾಂಧಿ ಅವರೊಂದಿಗೆ ನಿಂತುಕೊಳ್ಳಬೇಕಿದೆ ಎಂದು ಶಿವಕುಮಾರ್ ಹೇಳಿದರು.

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಯಾವತ್ತೂ ರಾಷ್ಟ್ರದ ಸ್ವಾಭಿಮಾನಕ್ಕೆ ಧಕ್ಕೆಯಾಗುವ ರೀತಿ ಮಾತಾಡಿಲ್ಲ, ದಿನೇದಿನೆ ಹೆಚ್ಚುತ್ತಿರುವ ಜನಪ್ರಿಯತೆಯಿಂದ ಅವರ ವಿರುದ್ಧ ಷಡ್ಯಂತ್ರ (conspiracy) ರಚಿಸಲಾಗಿದೆ. ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ನಾಯಕರ ವಿರುದ್ಧ ದೇಶದ ಉದ್ದಗಲಕ್ಕೂ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಮತ್ತು ನಗರದ ಫ್ರೀಡಂ ಪಾರ್ಕ್ ನಲ್ಲಿ ಜುಲೈ 12 ರಂದು ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 4 ರವರೆಗೆ ಮೌನ ಪ್ರತಿಭಟನೆಯನ್ನು ರಾಜ್ಯ ಕಾಂಗ್ರೆಸ್ ಕಾರ್ಯಕರ್ತರು ನಡೆಸುವರೆಂದು ಉಪ ಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಹೇಳಿದರು. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಟಿ ಉದ್ದೇಶಿಸಿ ಮಾತಾಡಿದ ಶಿವಕುಮಾರ್ ನ್ಯಾಯಾಲಯದ ತೀರ್ಪಿನ ಬಗ್ಗೆ ಕಾಂಗ್ರೆಸ್ ಕಾಮೆಂಟ್ ಮಾಡೋದಿಲ್ಲ ಆದರೆ, ರಾಹುಲ್ ಗಾಂಧಿ ವಿರುದ್ಧ ನಡೆಯುತ್ತಿರುವ ರಾಜಕೀಯ ಪಿತೂರಿಯನ್ನು ಖಂಡಿಸುತ್ತಾ ಪ್ರತಿಭಟನೆ ನಡೆಸುವುದಾಗಿ ಹೇಳಿದರು. ರಾಹುಲ್ ಗಾಂಧಿಯವರ ಭಾರತ ಜೋಡೋ ಯಾತ್ರೆಯ ನಂತರ ಕರ್ನಾಟಕಕ್ಕೆ ಹೆಚ್ಚಿನ ಶಕ್ತಿ ಸಿಕ್ಕಿದೆ, ದೇಶದ ಎಲ್ಲ ವಿರೋಧ ಪಕ್ಷಗಳು ಈಗ ಅವರೊಂದಿಗೆ ನಿಂತುಕೊಳ್ಳಬೇಕಿದೆ ಎಂದು ಶಿವಕುಮಾರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.