ಉಪ ಚುನಾವಣೆ ನಡೆಯಲಿರುವ ಎಲ್ಲ ಮೂರು ಕ್ಷೇತ್ರಗಳನ್ನು ಕಾಂಗ್ರೆಸ್ ಗೆಲ್ಲಲಿದೆ: ಜಮೀರ್ ಅಹ್ಮದ್
ಚನ್ನಪಟ್ಟಣ ಕ್ಷೇತ್ರದಿಂದ ಜೆಡಿಎಸ್ ಪಕ್ಷದ ಅಭ್ಯರ್ಥಿಯೇ ಗೆಲ್ಲೋದು ಅಂತ ಹೆಚ್ ಡಿ ಕುಮಾರಸ್ವಾಮಿ ಹೇಳುತ್ತಿದ್ದಾರೆ, ಆದರೆ ಮಾಧ್ಯಮ ಪ್ರತಿನಿಧಿಗಳು ಬರೆದಿಟ್ಟುಕೊಳ್ಳಿ, ಅಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕನಿಷ್ಠ ಮೂವತ್ತು ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಜಮೀರ್ ಅಹ್ಮದ್ ಎದೆ ತಟ್ಟಿಕೊಂಡು ಹೇಳಿದರು.
ಹುಬ್ಬಳ್ಳಿ: ನಗರದಲ್ಲಿಂದು ಪತ್ರಿಕಾ ಗೋಷ್ಠಿಯೊಂದನ್ನು ನಡೆಸಿ ಮಾತಾಡಿದ ವಸತಿ ಖಾತೆ ಸಚಿವ ಬಿಜೆಡ್ ಜಮೀರ್ ಅಹ್ಮದ್ ಖಾನ್, ವಿಧಾನಸಭೆಗೆ ನಡೆಯಲಿರುವ ಉಪ ಚುನಾವಣೆಯಲ್ಲಿ ಅಲ್ಪಸಂಖ್ಯಾತ ಅಭ್ಯರ್ಥಿಗೆ ಟಿಕೆಟ್ ನೀಡುವಂತೆ ಕೇಳಿರುವುದದು ಸತ್ಯ, ಅದರೆ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ತಾವು ಬದ್ಧರಾಗುರುವುದಾಗಿ ಹೇಳಿ ಕಾಂಗ್ರೆಸ್ ಯಾವತ್ತಿಗೂ ಹೈಕಮಾಂಡ್ ಆಧಾರಿತ ಪಕ್ಷ, ಅದು ಹಾಕಿದ ಗೆರೆಯನ್ನು ಯಾರೂ ದಾಟುವುದಿಲ್ಲ ಎಂದು ಹೇಳಿದರು. ಉಪ ಚುನಾವಣೆ ನಡೆಯುವ ಎಲ್ಲ 3 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂಬ ವಿಶ್ವಾಸ ಅವರು ವ್ಯಕ್ತಪಡಿಸಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಸಚಿವ ಜಮೀರ್ ಅಹ್ಮದ್ ಖಾನ್ ಗೆ ಶಾಸಕ ಎನ್ ಹೆಚ್ ಕೋನರೆಡ್ಡಿ ಮನೆಯಲ್ಲಿ ಭರ್ಜರಿ ಔತಣ!
Follow Us
Latest Videos
ಹೋದ ಜೀವ ವಾಪಸ್ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?

