ಹುಬ್ಬಳ್ಳಿ: ನಗರದಲ್ಲಿಂದು ಪತ್ರಿಕಾ ಗೋಷ್ಠಿಯೊಂದನ್ನು ನಡೆಸಿ ಮಾತಾಡಿದ ವಸತಿ ಖಾತೆ ಸಚಿವ ಬಿಜೆಡ್ ಜಮೀರ್ ಅಹ್ಮದ್ ಖಾನ್, ವಿಧಾನಸಭೆಗೆ ನಡೆಯಲಿರುವ ಉಪ ಚುನಾವಣೆಯಲ್ಲಿ ಅಲ್ಪಸಂಖ್ಯಾತ ಅಭ್ಯರ್ಥಿಗೆ ಟಿಕೆಟ್ ನೀಡುವಂತೆ ಕೇಳಿರುವುದದು ಸತ್ಯ, ಅದರೆ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ತಾವು ಬದ್ಧರಾಗುರುವುದಾಗಿ ಹೇಳಿ ಕಾಂಗ್ರೆಸ್ ಯಾವತ್ತಿಗೂ ಹೈಕಮಾಂಡ್ ಆಧಾರಿತ ಪಕ್ಷ, ಅದು ಹಾಕಿದ ಗೆರೆಯನ್ನು ಯಾರೂ ದಾಟುವುದಿಲ್ಲ ಎಂದು ಹೇಳಿದರು. ಉಪ ಚುನಾವಣೆ ನಡೆಯುವ ಎಲ್ಲ 3 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂಬ ವಿಶ್ವಾಸ ಅವರು ವ್ಯಕ್ತಪಡಿಸಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಸಚಿವ ಜಮೀರ್ ಅಹ್ಮದ್ ಖಾನ್ ಗೆ ಶಾಸಕ ಎನ್ ಹೆಚ್ ಕೋನರೆಡ್ಡಿ ಮನೆಯಲ್ಲಿ ಭರ್ಜರಿ ಔತಣ!