ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರು ಮತ್ತು ಯುವಕರಿಗೆ ವರ್ಷಕ್ಕೆ ರೂ. 1 ಲಕ್ಷ ಆರ್ಥಿಕ ನೆರವು ನೀಡಲಿದೆ: ಡಿಕೆ ಶಿವಕುಮಾರ್

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ತಾನು ಸಹಿಮಾಡಿ ಜನರಿಗೆ ಲಭ್ಯವಾಗುವಂತೆ ಮಾಡಿದ ಗ್ಯಾರಂಟಟಿ ಯೋಜನೆಗಳ ಹಾಗೆಯೇ ಕೇಂದ್ರದಲ್ಲೂ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ, ಮಹಿಳೆಯರಿಗೆ ಮತ್ತು ಯುವಕರಿಗೆ ವಾರ್ಷಿಕ ತಲಾ ಒಂದು ಲಕ್ಷ ರೂ. ನೀಡುವ ಗ್ಯಾರಂಟಿ ಯೋಜನೆಗೆ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಸಹಿ ಹಾಕಿದ್ದಾರೆ ಎಂದು ಶಿವಕುಮಾರ್ ಹೇಳಿದರು.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರು ಮತ್ತು ಯುವಕರಿಗೆ ವರ್ಷಕ್ಕೆ ರೂ. 1 ಲಕ್ಷ ಆರ್ಥಿಕ ನೆರವು ನೀಡಲಿದೆ: ಡಿಕೆ ಶಿವಕುಮಾರ್
|

Updated on: Apr 12, 2024 | 7:21 PM

ಕಲಬುರಗಿ: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಕಲಬುರಗಿ ಸಮಾವೇಶದಲ್ಲಿ (Kalaburagi Congress Convention) ಅಬ್ಬರದ ಭಾಷಣ ಮಾಡಿದರು. ಹಿಂದೊಮ್ಮೆ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರು ಅಲಂಕರಿಸಿದ್ದ ಸ್ಥಾನದಲ್ಲಿ ಕಲಬುರಗಿ ಭಾಗದ ಧೀಮಂತ ನಾಯಕ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಆಸೀನರಾಗಿದ್ದಾರೆ. ತಮ್ಮ ಕ್ಷೇತ್ರಕ್ಕೆ ಅಪಾರ ಕೊಡುಗೆಯನ್ನು ನೀಡಿರುವ ಅವರು ₹2,000 ಕೋಟಿ ವೆಚ್ಚದಲ್ಲಿ ಈಎಸ್ ಐ ಆಸ್ಪತ್ರೆಯನ್ನು ಕಟ್ಟಿಸಿದ್ದಾರೆ ಮತ್ತು ಎಲ್ಲ ಬಡ ಕುಟುಂಬಗಳಿಗೆ ₹ 25 ಲಕ್ಷ ಮೊತ್ತದ ಆರೋಗ್ಯ ವಿಮೆಯ ಸವಲತ್ತು ಮಾಡಿಸಿಕೊಟ್ಟಿದ್ದಾರೆ ಎಂದು ಶಿವಕುಮಾರ್ ಹೇಳಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ತಾನು ಸಹಿಮಾಡಿ ಜನರಿಗೆ ಲಭ್ಯವಾಗುವಂತೆ ಮಾಡಿದ ಗ್ಯಾರಂಟಟಿ ಯೋಜನೆಗಳ ಹಾಗೆಯೇ ಕೇಂದ್ರದಲ್ಲೂ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ, ಮಹಿಳೆಯರಿಗೆ ಮತ್ತು ಯುವಕರಿಗೆ ವಾರ್ಷಿಕ ತಲಾ ಒಂದು ಲಕ್ಷ ರೂ. ನೀಡುವ ಗ್ಯಾರಂಟಿ ಯೋಜನೆಗೆ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಸಹಿ ಹಾಕಿದ್ದಾರೆ ಎಂದು ಶಿವಕುಮಾರ್ ಹೇಳಿದರು. ಮಹಾಲಕ್ಷ್ಮಿ, ಯುವನ್ಯಾಯ್ ಯೋಜನೆಗಳಲ್ಲದೆ, ರೈತರ ಸಾಲಮನ್ನಾ ಮತ್ತು ಶ್ರಮಿಕ ನ್ಯಾಯ್ ಯೋಜನೆಗಳನ್ನೂ ಕಾಂಗ್ರೆಸ್ ಪಕ್ಷ ಆಧಿಕಾರಕ್ಕೆ ಬಂದರೆ ಜಾರಿಗೊಳಿಸಿ ಬಡವರಿಗೆ, ರೈತರಿಗೆ ಮತ್ತು ಶ್ರಮಿಕರಿಗೆ ನೆರವಾಗಲಿದೆ ಎಂದು ಶಿವಕುಮಾರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:    ರಾಜ್ಯವನ್ನು ಒಂದು ಸುತ್ತು ಹಾಕಿದ ಬಳಿಕ ಕಾಂಗ್ರೆಸ್​ಗೆ ಎಷ್ಟು ಸ್ಥಾನ ಸಿಗಲಿವೆ ಅಂತ ಹೇಳ್ತೀನಿ: ಡಿಕೆ ಶಿವಕುಮಾರ್

Follow us
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!