JDS leader’s prediction; ಕಾಂಗ್ರೆಸ್ ಬಗ್ಗೆ ಚೆನ್ನಾಗಿ ಗೊತ್ತು, 75ಕ್ಕಿಂತ ಹೆಚ್ಚು ಸ್ಥಾನ ಅದಕ್ಕೆ ಸಿಗಲ್ಲ: ಹೆಚ್ ಡಿ ಕುಮಾರಸ್ವಾಮಿ

ಅರುಣ್​ ಕುಮಾರ್​ ಬೆಳ್ಳಿ

Updated on: Mar 27, 2023 | 1:46 PM

ಬಾದಾಮಿಯಲ್ಲಿ ರೂ. 1, 200 ಕೋಟಿಗಳ ಅಭಿವೃದ್ಧಿ ಕೆಲಸಗಳು ನಡೆದಿರೋದು ತಾವು ಮುಖ್ಯಮಂತ್ರಿಯಾಗಿದ್ದಾಗ ಬಿಡುಗಡೆ ಮಾಡಿದ ಅನುದಾನದಿಂದ ಎಂದು ಕುಮಾರಸ್ವಾಮಿ ಹೇಳಿದರು.

ಮೈಸೂರು: ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿಗೆ (HD Kumaraswamy) ಕಾಂಗ್ರೆಸ್ ಮೇಲೆ ಭಯಂಕರ ಕೋಪವಿದೆ ಅನ್ನೋದು ಅವರ ಮಾತಲ್ಲೇ ಸ್ಪಷ್ಟವಾಗುತ್ತದೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ (Assembly Polls) ಕಾಂಗ್ರೆಸ್ ಪಕ್ಷಕ್ಕೆ 75 ಕ್ಕಿಂತ ಹೆಚ್ಚು ಸ್ಥಾಮ ಸಿಗೋದಿಲ್ಲ ಅಂತ ಅವರು ನಗರದಲ್ಲಿ ಸುದ್ದಿಗೋಷ್ಟಿಯೊಂದನ್ನು ಉದ್ದೇಶಿಸಿ ಮಾತಾಡುತ್ತಾ ಹೇಳಿದರು. ಅಷ್ಟೆಲ್ಲ ಭಾಗ್ಯಗಳನ್ನು ಕೊಟ್ಟರೂ 2018ರ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಸಿಕ್ಕಿದ್ದು ಕೇವಲ 79 ಸ್ಥಾನ ಮಾತ್ರ ಎಂದು ಕುಮಾರಸ್ವಾಮಿ ಹೇಳಿದರು. ಬಾದಾಮಿಯಲ್ಲಿ ರೂ. 1, 200 ಕೋಟಿಗಳ ಅಭಿವೃದ್ಧಿ ಕೆಲಸಗಳು (development works) ನಡೆದಿರೋದು ತಾವು ಮುಖ್ಯಮಂತ್ರಿಯಾಗಿದ್ದಾಗ ಬಿಡುಗಡೆ ಮಾಡಿದ ಅನುದಾನದಿಂದ ಎಂದು ಅವರು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Mar 27, 2023 01:46 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.