AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗಲಿದೆ: ಸಿದ್ದರಾಮಯ್ಯ, ಮುಖ್ಯಮಂತ್ರಿ

ತೆಲಂಗಾಣದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗಲಿದೆ: ಸಿದ್ದರಾಮಯ್ಯ, ಮುಖ್ಯಮಂತ್ರಿ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Nov 26, 2023 | 12:09 PM

Share

ವಿರೋಧ ಪಕ್ಷದ ನಾಯಕನಾಗಿ ಆಯ್ಕೆಯಾಗಿರುವ ಆರ್ ಅಶೋಕ ಅವರು, ಜಾತಿಗಣತಿ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತಡೆಯುವ ಪ್ರಯತ್ನ ಮಾಡುತ್ತಿದ್ದಾರೆ ಅಂತ ಮಾಧ್ಯಮಗಳಿಗೆ ನೀಡಿರುವ ಹೇಳಿಕೆ ಬಗ್ಗೆ ಕೇಳಿದಾಗ ಸಿದ್ದರಾಮಯ್ಯ; ಪಾಪ, ಈಗಷ್ಟೇ ಆ ಜವಾಬ್ದಾರಿ ಸಿಕ್ಕಿದೆ, ಹಾಗಾಗಿ ಬಾಯಿಗೆ ಬಂದಿದ್ದನ್ನೆಲ್ಲ ಮಾತಾಡುತ್ತಿದ್ದಾರೆ ಅಂತ ಹೇಳಿದರು.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಮತ್ತೊಂದು ಸುತ್ತಿನ ಚುನಾವಣಾ ಪ್ರಚಾರಕ್ಕಾಗಿ ಇಂದು ತೆಲಂಗಾಣಗೆ (Telangana) ತೆರಳಿದರು. ವಿಮಾನ ನಿಲ್ದಾಣಕ್ಕೆ ತೆರಳುವ ಮೊದಲು ವಿಧಾನ ಸೌಧದ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು ನವೆಂಬರ್ 30 ರಂದು ತೆಲಂಗಾಣದಲ್ಲಿ ಮತದಾನ ನಡೆಯಲಿದೆ, ಹಾಗಾಗಿ ಕೊನೆಯ ಸುತ್ತಿನ ಪ್ರಚಾರಕ್ಕೆ ಹೋಗುತ್ತಿರುವುದಾಗಿ ತಿಳಿಸಿದರು. ತೆಲಂಗಾಣದಲ್ಲಿ ಕಾಂಗ್ರೆಸ್ ಪಕ್ಷಕ್ಕೆ (Congress party) ಗೆಲ್ಲುವ ಅವಕಾಶ ಇದೆಯಾ ಅಂತ ಕೇಳಿದಾಗ ಶತ ಪ್ರತಿಶತದಷ್ಟು ಭರವಸೆ ಇದೆ, ಗೆದ್ದೇ ಗೆಲ್ತೀವಿ ಅಂತ ಮುಖ್ಯಮಂತ್ರಿ ಹೇಳಿದರು. ಎಷ್ಟು ಸೀಟು ಬರಬಹುದು ಸರ್ ಅಂತ ಕೇಳಿದರೆ, ಹಾಗೆಲ್ಲ ಶಾಸ್ತ್ರ ಹೇಳೋದಿಕ್ಕೆ ಆಗಲ್ಲ ಅಂತ ಸಿಡುಕಿ ಸ್ಪಷ್ಟ ಬಹುಮತ ಸಿಗಲಿದೆ ಅನ್ನುತ್ತಾರೆ. ಆದರೆ, ಕರ್ನಾಟಕ ವಿಧಾನಸಭಾ ಚುನಾವಣೆಯಲಲ್ಲಿ ಅವರು ಕಾಂಗ್ರೆಸ್ ಪಕ್ಷ 150 ಕ್ಕಿಂಯ ಹೆಚ್ಚು ಸೀಟು ಗೆಲ್ಲಲಿದೆ ಭವಿಷ್ಯವಾಣಿ ನುಡಿದಿದ್ದರು!

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.