ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯ ಸಾಧಿಸುತ್ತೆ ಎಂದ ಸುರ್ಜೇವಾಲ
ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಕರ್ನಾಟಕ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ರೂಪಾಯಿ ಕುಸಿತ, ಗ್ಯಾಸ್ ಮತ್ತು ಇಂಧನ ಬೆಲೆ ಏರಿಕೆ, ಮತ್ತು ನಿರುದ್ಯೋಗದಂತಹ ಆರ್ಥಿಕ ಬಿಕ್ಕಟ್ಟುಗಳ ಬಗ್ಗೆ ಬಿಜೆಪಿ ಸರ್ಕಾರವನ್ನು ಟೀಕಿಸಿದರು. ರಾಜ್ಯದ ಜನತೆ ಕಾಂಗ್ರೆಸ್ನೊಂದಿಗಿದ್ದಾರೆ, ನಮ್ಮ ಪ್ರಣಾಳಿಕೆ ಈಡೇರಿಸಿದ್ದೇವೆ ಎಂದು ಹೇಳಿದರು.
ಬೆಂಗಳೂರು, ಮಾರ್ಚ್ 20: ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಕರ್ನಾಟಕದಲ್ಲಿ ಮುಂಬರುವ ಉಪಚುನಾವಣೆಗಳಲ್ಲಿ ಪಕ್ಷದ ಗೆಲುವಿನ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯ ಸಾಧಿಸುತ್ತೆ. ಟಿಕೆಟ್ ಬೇಕೆಂದು ಎಲ್ಲರಿಗೂ ಆಸೆ, ಆಸಕ್ತಿ ಇದ್ದೇ ಇರುತ್ತೆ. ನ್ಯಾಯ ಕೊಡಿಸುವ ಕೆಲಸ ಕಾಂಗ್ರೆಸ್ ಪಕ್ಷ ಮಾಡುತ್ತದೆ. ಕರ್ನಾಟಕ ಜನ ನಮ್ಮ ಪರ ಇದ್ದಾರೆ. ಹಿಂದೆಯೂ ಚುನಾವಣೆ ಗೆದ್ದಿದ್ದೇವೆ, ಈಗಲೂ ಗೆಲ್ಲುತ್ತೇವೆ ಎಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
