Video: ನೀರಿನ ವಿಚಾರವಾಗಿ ಸ್ವಪಕ್ಷದ ಶಾಸಕರಿಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್ ಕಾರ್ಯಕರ್ತೆ

ವಿಜಯನಗರದಲ್ಲಿ ಕುಡಿಯುವ ಟ್ಯಾಂಕರ್ ನೀರಿನ ವಿಚಾರವಾಗಿ ಕಾಂಗ್ರೆಸ್ ಹಾಲಿ ಶಾಸಕ ಗವಿಯಪ್ಪ ಹಾಗೂ ಬಿಜೆಪಿಯ ಮಾಜಿ ಶಾಸಕ ಆನಂದ್ ಸಿಂಗ್ ನಡುವೆ ರಾಜಕೀಯ ಜಟಾಪಟಿ ನಡೆದಿದೆ. ಇದರ ಮಧ್ಯ ಪ್ರವೇಶಿಸಿದ ಕಾಂಗ್ರೆಸ್ ಮಹಿಳಾ ಕಾರ್ಯಕರ್ತೆ ಪಕ್ಷದ ಮುಖ ಮುಖ ಮೂತಿ ನೋಡದೇ ಸ್ವಪಕ್ಷದ ಶಾಸಕ ಗವಿಯಪ್ಪ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇದೀಗ ಈ ವಿಡಿಯೋ ಫುಲ್ ವೈರಲ್ ಆಗಿದೆ.

Video: ನೀರಿನ ವಿಚಾರವಾಗಿ ಸ್ವಪಕ್ಷದ ಶಾಸಕರಿಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್ ಕಾರ್ಯಕರ್ತೆ
|

Updated on: May 28, 2024 | 11:06 PM

ವಿಜಯನಗರ, (ಮೇ 28): ವಿಜಯನಗರ ಜಿಲ್ಲೆಯ ನಗರ ಪ್ರದೇಶದಲ್ಲೇ ನೀರಿಗೆ ಹಾಹಾಕಾರ ಎದುರಾಗಿದೆ. ಕುಡಿಯುವ ಟ್ಯಾಂಕರ್​ ನೀರಿನ ವಿಚಾರವಾಗಿ ಕಾಂಗ್ರೆಸ್​ ಹಾಲಿ ಶಾಸಕ ಗವಿಯಪ್ಪ ಮತ್ತು ಮಾಜಿ ಶಾಸಕ ಆನಂದ್ ಸಿಂಗ್ ನಡುವೆ ಜಟಾಪಟಿ ನಡೆದಿದೆ. ಇದರ ಮಧ್ಯ ಪ್ರವೇಶಿಸಿದ ಸ್ಥಳೀಯ ಕಾಂಗ್ರೆಸ್​ ಕಾರ್ಯಕರ್ತೆ ಸ್ವಪಕ್ಷದ ಶಾಸಕ ಗವಿಯಪ್ಪಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಬಗ್ಗೆ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಬಿಟ್ಟಿರುವ ಕೈ ಕಾರ್ಯಕರ್ತೆ ಹಿಂದುಮತಿ, ಶಾಸಕರಾಗಿ 1 ವರ್ಷ ಆಯ್ತು, ಯಾರ ಕಷ್ಟ ಸುಖದಲ್ಲಿ ಭಾಗಿಯಾಗಿದ್ದೀರಿ. ಕಾಂಗ್ರೆಸ್ ಗ್ಯಾರಂಟಿಗಳನ್ನು ಕೊಟ್ಟಿದ್ದರಿಂದ ಗವಿಯಪ್ಪ ಬಚಾವ್ ಆಗಿದ್ದಾರೆ. ಇವತ್ತಿನವರೆಗೆ ಯಾವ ವಾರ್ಡ್​​ಗೆ ನೀವು ಭೇಟಿ ನೀಡಿದ್ದೀರಿ ಎಂದು ಸ್ವಪಕ್ಷದ ಶಾಸಕರನ್ನೇ ತರಾಟೆಗೆ ತೆಗೆದುಕೊಂಡಿದ್ದಾರೆ.

ನೀರಿನ ವಿಚಾರದಲ್ಲಿ ನೀವು ರಾಜಕೀಯ ಮಾಡಬೇಡಿ ಗವಿಯಪ್ಪ ಅವರೇ ನಿಮ್ಮ ತಾಕತ್​​ನ್ನು ನೀವು ತೋರಿಸಿ. ಆನಂದ್ ಸಿಂಗ್ ಅವರು ತಮ್ಮ ತಾಕತ್​​ ತೋರಿಸ್ತಾರೆ. ಪಕ್ಷ ಅಡ್ಡ ತಂದು ರಾಜಕೀಯ ಮಾಡಬೇಡಿ. ಅಧಿಕಾರದಲ್ಲಿ ಇರುವ ಮೊದಲೇ ಆನಂದ್ ಸಿಂಗ್ ನೀರು ಕೊಡುತ್ತಿದ್ದಾರೆ. ಕಾಂಗ್ರೆಸ್​​ಗೆ ದುಡಿದವರನ್ನ ಕರೆದು ಯಾವತ್ತೂ ನೀವು ಮಾತಾಡಿಸಿಲ್ಲ. ನಿಮ್ಮ ಹಿಂಬಾಲಕರನ್ನು ಮಾತ್ರ ಚೆನ್ನಾಗಿ ನೋಡಿಕೊಳ್ತಿದ್ದೀರಿ ಎಂದು ಶಾಸಕ ಗವಿಯಪ್ಪ ಅವರಿಗೆ ಅವರದ್ದೇ ಪಕ್ಷದ ಕಾರ್ಯಕರ್ತೆ ಹಿಗ್ಗಾಮುಗ್ಗಾ ಜಾಡಿಸಿದ್ದಾರೆ. ಇದೀಗ ಈ ವಿಡಿಯೋ ಫುಲ್ ವೈರಲ್ ಆಗಿದೆ.

Follow us
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ
ದರ್ಶನ್ ಕುಟುಂಬ  ಜೊತೆ ನಿರಂತರವಾಗಿ ಸಂಪರ್ಕದಲ್ಲಿರುವೆ: ಸುಮಲತಾ ಅಂಬರೀಶ್
ದರ್ಶನ್ ಕುಟುಂಬ  ಜೊತೆ ನಿರಂತರವಾಗಿ ಸಂಪರ್ಕದಲ್ಲಿರುವೆ: ಸುಮಲತಾ ಅಂಬರೀಶ್
ಶ್ರೀರಾಮ ಮಂದಿರ ಮೇಲ್ಚಾವಣಿ ಸೋರಿಕೆಗೆ ಪೇಜಾವರಶ್ರೀ ಸ್ಪಷ್ಟನೆ
ಶ್ರೀರಾಮ ಮಂದಿರ ಮೇಲ್ಚಾವಣಿ ಸೋರಿಕೆಗೆ ಪೇಜಾವರಶ್ರೀ ಸ್ಪಷ್ಟನೆ
ಮುಂಬೈ: ಮುಗಿಲು ಮುಟ್ಟಿದ ಸಂಭ್ರಮ: ರೋಹಿತ್​, ಕೊಹ್ಲಿ ಪರ ಫ್ಯಾನ್ಸ್​ ಘೋಷಣೆ
ಮುಂಬೈ: ಮುಗಿಲು ಮುಟ್ಟಿದ ಸಂಭ್ರಮ: ರೋಹಿತ್​, ಕೊಹ್ಲಿ ಪರ ಫ್ಯಾನ್ಸ್​ ಘೋಷಣೆ
ರಾಮನಗರ ಬಿಬಿಎಂಪಿ ವ್ಯಾಪ್ತಿಗೆ ಸೇರಿಸುವ ಡಿಕೆಶಿ ಆಶಯಕ್ಕೆ ರಾಜಣ್ಣ ಸ್ವಾಗತ
ರಾಮನಗರ ಬಿಬಿಎಂಪಿ ವ್ಯಾಪ್ತಿಗೆ ಸೇರಿಸುವ ಡಿಕೆಶಿ ಆಶಯಕ್ಕೆ ರಾಜಣ್ಣ ಸ್ವಾಗತ
ಟೀಮ್ ಇಂಡಿಯಾ ವಿಜಯೋತ್ಸವ: ಎಲ್ಲಿ ನೋಡಿದರಲ್ಲಿ ಜನ, ಅಭಿಮಾನಿಗಳ ಸಂಭ್ರಮ
ಟೀಮ್ ಇಂಡಿಯಾ ವಿಜಯೋತ್ಸವ: ಎಲ್ಲಿ ನೋಡಿದರಲ್ಲಿ ಜನ, ಅಭಿಮಾನಿಗಳ ಸಂಭ್ರಮ
ದರ್ಶನ್​ ಈಗ ಜಾಮೀನು ಕೇಳೋಕೆ ಆಗಲ್ಲ: ಕಾರಣ ತಿಳಿಸಿದ ಲಾಯರ್​
ದರ್ಶನ್​ ಈಗ ಜಾಮೀನು ಕೇಳೋಕೆ ಆಗಲ್ಲ: ಕಾರಣ ತಿಳಿಸಿದ ಲಾಯರ್​
ಮುಂಬೈನಲ್ಲಿ ಟೀಂ ಇಂಡಿಯಾ ಭರ್ಜರಿ ರೋಡ್​ ಶೋ
ಮುಂಬೈನಲ್ಲಿ ಟೀಂ ಇಂಡಿಯಾ ಭರ್ಜರಿ ರೋಡ್​ ಶೋ
ಜಮೀನು ಬೆಲೆ ₹ 62 ಕೋಟಿ ಆಗುತ್ತೆ, ಮುಡಾ ನಮಗೆ ಹಣ ಕೊಡಲಿ: ಸಿದ್ದರಾಮಯ್ಯ
ಜಮೀನು ಬೆಲೆ ₹ 62 ಕೋಟಿ ಆಗುತ್ತೆ, ಮುಡಾ ನಮಗೆ ಹಣ ಕೊಡಲಿ: ಸಿದ್ದರಾಮಯ್ಯ