Video: ನೀರಿನ ವಿಚಾರವಾಗಿ ಸ್ವಪಕ್ಷದ ಶಾಸಕರಿಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್ ಕಾರ್ಯಕರ್ತೆ

Updated on: May 28, 2024 | 11:06 PM

ವಿಜಯನಗರದಲ್ಲಿ ಕುಡಿಯುವ ಟ್ಯಾಂಕರ್ ನೀರಿನ ವಿಚಾರವಾಗಿ ಕಾಂಗ್ರೆಸ್ ಹಾಲಿ ಶಾಸಕ ಗವಿಯಪ್ಪ ಹಾಗೂ ಬಿಜೆಪಿಯ ಮಾಜಿ ಶಾಸಕ ಆನಂದ್ ಸಿಂಗ್ ನಡುವೆ ರಾಜಕೀಯ ಜಟಾಪಟಿ ನಡೆದಿದೆ. ಇದರ ಮಧ್ಯ ಪ್ರವೇಶಿಸಿದ ಕಾಂಗ್ರೆಸ್ ಮಹಿಳಾ ಕಾರ್ಯಕರ್ತೆ ಪಕ್ಷದ ಮುಖ ಮುಖ ಮೂತಿ ನೋಡದೇ ಸ್ವಪಕ್ಷದ ಶಾಸಕ ಗವಿಯಪ್ಪ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇದೀಗ ಈ ವಿಡಿಯೋ ಫುಲ್ ವೈರಲ್ ಆಗಿದೆ.

ವಿಜಯನಗರ, (ಮೇ 28): ವಿಜಯನಗರ ಜಿಲ್ಲೆಯ ನಗರ ಪ್ರದೇಶದಲ್ಲೇ ನೀರಿಗೆ ಹಾಹಾಕಾರ ಎದುರಾಗಿದೆ. ಕುಡಿಯುವ ಟ್ಯಾಂಕರ್​ ನೀರಿನ ವಿಚಾರವಾಗಿ ಕಾಂಗ್ರೆಸ್​ ಹಾಲಿ ಶಾಸಕ ಗವಿಯಪ್ಪ ಮತ್ತು ಮಾಜಿ ಶಾಸಕ ಆನಂದ್ ಸಿಂಗ್ ನಡುವೆ ಜಟಾಪಟಿ ನಡೆದಿದೆ. ಇದರ ಮಧ್ಯ ಪ್ರವೇಶಿಸಿದ ಸ್ಥಳೀಯ ಕಾಂಗ್ರೆಸ್​ ಕಾರ್ಯಕರ್ತೆ ಸ್ವಪಕ್ಷದ ಶಾಸಕ ಗವಿಯಪ್ಪಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಬಗ್ಗೆ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಬಿಟ್ಟಿರುವ ಕೈ ಕಾರ್ಯಕರ್ತೆ ಹಿಂದುಮತಿ, ಶಾಸಕರಾಗಿ 1 ವರ್ಷ ಆಯ್ತು, ಯಾರ ಕಷ್ಟ ಸುಖದಲ್ಲಿ ಭಾಗಿಯಾಗಿದ್ದೀರಿ. ಕಾಂಗ್ರೆಸ್ ಗ್ಯಾರಂಟಿಗಳನ್ನು ಕೊಟ್ಟಿದ್ದರಿಂದ ಗವಿಯಪ್ಪ ಬಚಾವ್ ಆಗಿದ್ದಾರೆ. ಇವತ್ತಿನವರೆಗೆ ಯಾವ ವಾರ್ಡ್​​ಗೆ ನೀವು ಭೇಟಿ ನೀಡಿದ್ದೀರಿ ಎಂದು ಸ್ವಪಕ್ಷದ ಶಾಸಕರನ್ನೇ ತರಾಟೆಗೆ ತೆಗೆದುಕೊಂಡಿದ್ದಾರೆ.

ನೀರಿನ ವಿಚಾರದಲ್ಲಿ ನೀವು ರಾಜಕೀಯ ಮಾಡಬೇಡಿ ಗವಿಯಪ್ಪ ಅವರೇ ನಿಮ್ಮ ತಾಕತ್​​ನ್ನು ನೀವು ತೋರಿಸಿ. ಆನಂದ್ ಸಿಂಗ್ ಅವರು ತಮ್ಮ ತಾಕತ್​​ ತೋರಿಸ್ತಾರೆ. ಪಕ್ಷ ಅಡ್ಡ ತಂದು ರಾಜಕೀಯ ಮಾಡಬೇಡಿ. ಅಧಿಕಾರದಲ್ಲಿ ಇರುವ ಮೊದಲೇ ಆನಂದ್ ಸಿಂಗ್ ನೀರು ಕೊಡುತ್ತಿದ್ದಾರೆ. ಕಾಂಗ್ರೆಸ್​​ಗೆ ದುಡಿದವರನ್ನ ಕರೆದು ಯಾವತ್ತೂ ನೀವು ಮಾತಾಡಿಸಿಲ್ಲ. ನಿಮ್ಮ ಹಿಂಬಾಲಕರನ್ನು ಮಾತ್ರ ಚೆನ್ನಾಗಿ ನೋಡಿಕೊಳ್ತಿದ್ದೀರಿ ಎಂದು ಶಾಸಕ ಗವಿಯಪ್ಪ ಅವರಿಗೆ ಅವರದ್ದೇ ಪಕ್ಷದ ಕಾರ್ಯಕರ್ತೆ ಹಿಗ್ಗಾಮುಗ್ಗಾ ಜಾಡಿಸಿದ್ದಾರೆ. ಇದೀಗ ಈ ವಿಡಿಯೋ ಫುಲ್ ವೈರಲ್ ಆಗಿದೆ.

Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More